ಸುಳ್ಯ: ಅಯ್ಯನಕಟ್ಟೆ ಪರಿಸರ ಶೃಂಗಾರಗೊಂಡು ಜಾತ್ರೋತ್ಸವಕ್ಕೆ ಅಣಿಯಾಗುತ್ತಿದೆ.
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಇಲ್ಲಿನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜ.25 ರಿಂದ ಜ. 27 ರ ತನಕ ಹಾಗೂ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಯು ಜ. 27 ರಿಂದ ಜ. 30ರ ತನಕ ಜರಗಲಿದೆ. ಈ ಪ್ರಯುಕ್ತ ಸಿದ್ಧತೆಗಳು ಅಂತಿಮ ಹಂತದಲ್ಲಿದೆ. ಪ್ರದೇಶದಲ್ಲೆಲ್ಲ ತಳಿರು ತೋರಣ, ಕೇಸರಿ ವರ್ಣದ ಬ್ಯಾನರ್, ಬಂಟಿಂಗ್ಸ್, ರಾರಾಜಿಸುತ್ತಿದೆ. ಆಕರ್ಷಕ ದ್ವಾರಗಳು, ರಸ್ತೆ ಬದಿಯಲ್ಲಿನ ಅಲಂಕಾರಗಳು ಕೈ ಬೀಸಿ ಕರೆಯುತಿದೆ. ಬ್ರಹ್ಮಕಲಶೋತ್ಸವಕ್ಕೆ ಮತ್ತು ಜಾತ್ರೋತ್ಸವದ ಸಿದ್ಧತೆಗೆ ಕಳಂಜ, ಬಾಳಿಲ, ಮುಪ್ಪೇರ್ಯ ಗ್ರಾಮದ ಜನರು ಹಗಲಿರುಳೆನ್ನದೆ ದುಡಿಯುತ್ತಿದ್ದಾರೆ.
ಶ್ರಮದಾನದ ಮೂಲಕ ಸಿದ್ಧತೆಗೆ ಅಂತಿಮ ಸ್ಪರ್ಶ ನೀಡಲಾಗಿದೆ. ನಾಡಿಗೆಲ್ಲ ಆಮಂತ್ರಣ ಪತ್ರಿಕೆ ಹಂಚಲಾಗಿದೆ. ಒಟ್ಟಿನಲ್ಲಿ ವಾರಗಳ ಕಾಲ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ವೈಭವದ ಜಾತ್ರೆಗೆ ಊರಿಗೆ ಊರೇ ಸಿದ್ಧಗೊಂಡಿದೆ.
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…