ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವವು ಜ. 25 ರಿಂದ 30 ರ ತನಕ ಜರಗಲಿದ್ದು, ಜ. 25 ರಂದು ಬೆಳಿಗ್ಗೆ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಗಮಿಸಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಪ್ರಮುಖರು ಸೇರಿ ತಂತ್ರಿಗಳನ್ನು ಸ್ವಾಗತಿಸಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಕುಯಿಂತೋಡು, ಶ್ರೀ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಆಡಳಿತ ಸಮಿತಿ ವಿಶ್ವಸ್ಥರಾದ ತಂಟೆಪ್ಪಾಡಿ ಲಿಂಗಪ್ಪ ಗೌಡ, ಜಗನ್ನಾಥ ರೈ ಕಳಂಜಗುತ್ತು, ಮೂರು ಸಮಿತಿಗಳ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಆಡಳಿತ ಸಮಿತಿ ಕೋಶಾಧಿಕಾರಿ ಗಣೇಶ್ ಮುದ್ದಾಜೆ, ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯದರ್ಶಿ ಚಿದಾನಂದ ಗೌಡ ಬಾಳಿಲ, ಉಪಾಧ್ಯಕ್ಷ ರುಕ್ಮಯ್ಯ ಗೌಡ ಕಳಂಜ, ಸಂಚಾಲಕ ರಾಮಚಂದ್ರ ರಾವ್ ಸೇರಿದಂತೆ ಸಮಿತಿಗಳ ಸಂಚಾಲಕರು, ಸದಸ್ಯರು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…