ಕಳಂಜ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಸಭೆ ಜರುಗಿತು. ಜೀರ್ಣೋದ್ಧಾರಗೊಂಡು ಮುಂದಿನ ಜನವರಿ ತಿಂಗಳಲ್ಲಿ ಪ್ರತಿಷ್ಟಾ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಸಭೆಯಲ್ಲಿ ವಿಚಾರ ವಿಮರ್ಶೆ ನಡೆಸಲಾಯಿತು.
ಗೌರವಾಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ಸಂಚಾಲಕ ಟಿ.ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಸಹಕಾರ್ಯದರ್ಶಿ ಚಿದಾನಂದ ಬಾಳಿಲ, ಕೋಶಾಧಿಕಾರಿ ರಾಧಾಕೃಷ್ಣ ಕೋಟೆ, ಉಪಾಧ್ಯಕ್ಷರುಗಳಾಗಿ ಜಾಹ್ನವಿ ಕಾಂಚೋಡು, ಗಂಗಾಧರ ಮುಪ್ಪೇರ್ಯ,ಹಾಗೂ ರುಕ್ಮಯ್ಯಗೌಡ ಕಳಂಜ ಇವರನ್ನೊಳಗೊಂಡ ಬ್ರಹ್ಮಕಲಶೋತ್ಸವ ಸಮಿತಿಯನ್ನು ರಚಿಸಲಾಯಿತು. ವಿವಿಧ ಉಪ ಸಮಿತಿಗಳನ್ನು ಕೂಡಾ ರಚಿಸಲಾಯಿತು.
ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಅಧ್ಯಕ್ಷ ಕೆದ್ಲ ನರಸಿಂಹ ಭಟ್,ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ, ಪ್ರ.ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷಣ ಗೌಡ, ಮೊಕ್ತೇಸರರುಗಳಾದ ಬಾಳಿಲ ರಾಮಚಂದ್ರ ರಾವ್, ಮುಂಡುಗಾರು ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…