ಕಳಂಜ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಸಭೆ ಜರುಗಿತು. ಜೀರ್ಣೋದ್ಧಾರಗೊಂಡು ಮುಂದಿನ ಜನವರಿ ತಿಂಗಳಲ್ಲಿ ಪ್ರತಿಷ್ಟಾ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಸಭೆಯಲ್ಲಿ ವಿಚಾರ ವಿಮರ್ಶೆ ನಡೆಸಲಾಯಿತು.
ಗೌರವಾಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ಸಂಚಾಲಕ ಟಿ.ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಸಹಕಾರ್ಯದರ್ಶಿ ಚಿದಾನಂದ ಬಾಳಿಲ, ಕೋಶಾಧಿಕಾರಿ ರಾಧಾಕೃಷ್ಣ ಕೋಟೆ, ಉಪಾಧ್ಯಕ್ಷರುಗಳಾಗಿ ಜಾಹ್ನವಿ ಕಾಂಚೋಡು, ಗಂಗಾಧರ ಮುಪ್ಪೇರ್ಯ,ಹಾಗೂ ರುಕ್ಮಯ್ಯಗೌಡ ಕಳಂಜ ಇವರನ್ನೊಳಗೊಂಡ ಬ್ರಹ್ಮಕಲಶೋತ್ಸವ ಸಮಿತಿಯನ್ನು ರಚಿಸಲಾಯಿತು. ವಿವಿಧ ಉಪ ಸಮಿತಿಗಳನ್ನು ಕೂಡಾ ರಚಿಸಲಾಯಿತು.
ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಅಧ್ಯಕ್ಷ ಕೆದ್ಲ ನರಸಿಂಹ ಭಟ್,ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ, ಪ್ರ.ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷಣ ಗೌಡ, ಮೊಕ್ತೇಸರರುಗಳಾದ ಬಾಳಿಲ ರಾಮಚಂದ್ರ ರಾವ್, ಮುಂಡುಗಾರು ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…