ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಗೆ ಮತ್ತೆ ವೈಭವದ ಚಾಲನೆ ನೀಡಲಾಗಿದೆ. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಜಾತ್ರೋತ್ಸವ ಆರಂಭಗೊಂಡಿತು.
ಗತ ವೈಭವವನ್ನು ನೆನೆಪಿಸಿ ಮತ್ತೆ ಆರಂಭಗೊಂಡ ಜಾತ್ರೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.
ಜ. 28ರಂದು ಬೆಳಗಿನ ಜಾವ ಐದಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ ಏಳಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ ನಡೆಯಿತು.
ಜ.29 ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8.00ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10 ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ ಐದಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…