ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಗೆ ಮತ್ತೆ ವೈಭವದ ಚಾಲನೆ ನೀಡಲಾಗಿದೆ. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಜಾತ್ರೋತ್ಸವ ಆರಂಭಗೊಂಡಿತು.
ಗತ ವೈಭವವನ್ನು ನೆನೆಪಿಸಿ ಮತ್ತೆ ಆರಂಭಗೊಂಡ ಜಾತ್ರೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.
ಜ. 28ರಂದು ಬೆಳಗಿನ ಜಾವ ಐದಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ ಏಳಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ ನಡೆಯಿತು.
ಜ.29 ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8.00ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10 ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ ಐದಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…