Advertisement
ಧಾರ್ಮಿಕ

ಅಯ್ಯನಕಟ್ಟೆ ಜಾತ್ರೆಗೆ ವೈಭವದ ಚಾಲನೆ

Share

ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಗೆ ಮತ್ತೆ ವೈಭವದ ಚಾಲನೆ ನೀಡಲಾಗಿದೆ. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಜಾತ್ರೋತ್ಸವ ಆರಂಭಗೊಂಡಿತು.

ಗತ ವೈಭವವನ್ನು ನೆನೆಪಿಸಿ ಮತ್ತೆ ಆರಂಭಗೊಂಡ ಜಾತ್ರೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.

ಜ. 28ರಂದು ಬೆಳಗಿನ ಜಾವ ಐದಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ ಏಳಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ ನಡೆಯಿತು‌.

 

ಜ.29 ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8.00ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10 ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ ಐದಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

4 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

4 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago