Advertisement
ಧಾರ್ಮಿಕ

ಅಯ್ಯನಕಟ್ಟೆ ಜಾತ್ರೆ: ಧರ್ಮ ಬದುಕಿಗೆ ಸಂವಿಧಾನವಿದ್ದಂತೆ – ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ

Share

ಸುಳ್ಯ: ಧರ್ಮದಲ್ಲಿ ನಮ್ಮ ಸಂಸ್ಕೃತಿ ಅಡಗಿದೆ. ಅದು ಬದುಕಿಗೆ ಸಂವಿಧಾನವಿದ್ದಂತೆ. ಸರ್ವರ ಅಭ್ಯುದಯಕ್ಕಾಗಿ ಧರ್ಮ ಹುಟ್ಟಿದೆ ಎಂದು ಶ್ರೀಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಭಜನೆ ಮನಸಿಗೆ ಶಾಂತಿ ನೆಮ್ಮದಿಯನ್ನು ನೀಡುವುದರೊಂದಿಗೆ ಬದುಕಿಗೆ ಮಾರ್ಗಸೂಚಿಯನ್ನು ನೀಡುತ್ತದೆ ಎಂದು ಅವರು ಹೇಳಿದರು.

Advertisement
Advertisement

ಶಾಸಕ ಎಸ್‌.ಅಂಗಾರ, ವಾಸ್ತುಶಿಲ್ಪಿ ಎಸ್.ಎಂ. ಪ್ರಸಾದ ಮುನಿಯಂಗಳ ಮುಖ್ಯ ಅತಿಥಿಗಳಾಗಿದ್ದರು. ಜಿ.ಪಂ. ಸದಸ್ಯ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎಸ್.ಎನ್. ಮನ್ಮಥ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನಿಕಟಪೂರ್ವ ಧರ್ಮದರ್ಶಿ ಕೆದ್ಲ ನಾರಾಯಣ ಭಟ್, ಉದ್ಯಮಿ ವಿನೋದ ಕುಮಾರ್ ಶೆಟ್ಟಿ ಬೆಂಗಳೂರು ಅತಿಥಿಗಳಾಗಿ ಭಾಗವಹಿಸಿದ್ದರು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಗೌರವಾಧ್ಯಕ್ಷ ಬಾಳಿಲ ಸುಬ್ರಾಯ ಅಡಿಕೆಹಿತ್ಲು, ಮೂರು ಸಮಿತಿಗಳ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಕುಯಿಂತೋಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ ಮತ್ತು ದಮಯಂತಿ ದಂಪತಿಗಳನ್ನು ಒಡಿಯೂರು ಶ್ರೀಗಳು ಸನ್ಮಾನಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಎ.ಎಂ. ಸುಧಾಕರ ರೈ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಜನ ಕೆ.ವಿ. ಪ್ರಾರ್ಥಿಸಿದರು. ಅಧ್ಯಾಪಕರುಗಳಾದ ಜಗದೀಶ್ ಮುಂಡುಗಾರು, ಯಶೋಧರ ಕಳಂಜ ಮತ್ತು ನವ್ಯ ಅಯ್ಯನಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

21 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

21 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago