ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವ ಮನಸೂರೆಗೊಳ್ಳುತಿದೆ.
ಸೋಮವಾರ ರಾತ್ರಿ ಮಂಗಳೂರಿನ ಸನಾತನ ನಾಟ್ಯಾಲಯ ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ವೈಭವ-ಪುಣ್ಯ ಭೂಮಿ ಭಾರತ ಆದರ್ಶ ಗೋಖಲೆ ನೇತೃತ್ವದಲ್ಲಿ ನಡೆಯಿತು.
ಅಲ್ಲದೆ ಶ್ರೀರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ಮಹಾವಿಷ್ಣು ಭಜನಾ ಮಂಡಳಿ, ಬಾಳಿಲ ಮುಪ್ಪೇರ್ಯ, ಶ್ರೀ ಮಹಾದೇವ ಭಜನಾ ಮಂಡಳಿ, ಪುಳ್ಕೂರು, ಕಾಸರಗೋಡು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸುಜನ್ ಕೆ.ವಿ., ಸುಜಿತ್ ಕೆ.ವಿ. ಮತ್ತು ಬಳಗದವರಿಂದ ಗಾನ-ಕುಂಚ, ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಕೋಟೆಮುಂಡುಗಾರು ಇವರಿಂದ ಕುಣಿತ ಭಜನೆ, ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ ಇದರ ಸದಸ್ಯರಿಂದ ರಾಘವ ಕಳಂಜರವರ ಸಂಯೋಜನೆಯಲ್ಲಿ ಸಿದ್ಧವೇಷ ಮತ್ತು ಕೋಲಾಟ ನಡೆಯಿತು.
ಜ. 29 ರಂದು ಕಲ್ಲಮಾಡದಲ್ಲಿ ಸಂಜೆ 7 ರಿಂದ ದ.ಕ.ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಬಯಲಾಟ – ಪಾಂಡವಾಶ್ವಮೇಧ ನಡೆಯಲಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…