ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನ ಮೂರು ಕಲ್ಕಡ್ಕ ಇದರ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜ. 25 ರಿಂದ 27 ರವರೆಗೆ ಹಾಗೂ ಅಯ್ಯನಕಟ್ಟೆ ಜಾತ್ರೆ ಜ. 27 ರಿಂದ ಜ. 30 ರ ತನಕ ನಡೆಯಲಿದ್ದು, ಈ ಬಗ್ಗೆ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಡಿ. 14 ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾ ಭವನದಲ್ಲಿ ನಡೆಯಿತು.
ಬೆಳ್ಳಾರೆ ಕ್ಷೇತ್ರದ ಜಿ.ಪಂ. ಸದಸ್ಯ ಎಸ್.ಎನ್. ಮನ್ಮಥ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಜೀರ್ಣೋದ್ಧಾರ, ಬ್ರಹ್ಮ ಕಲಶೋತ್ಸವ ಮತ್ತು ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಎ.ಎಂ. ಸುಧಾಕರ ರೈ ಆಮಂತ್ರಣ ಪತ್ರಿಕೆ ವಿತರಿಸುವ ಬಗ್ಗೆ ಹಾಗೂ ಸ್ಮರಣ ಸಂಚಿಕೆಯ ಬಗ್ಗೆ ಮಾಹಿತಿ ನೀಡಿದರು.
ಆಡಳಿತ ಸಮಿತಿ ಅಧ್ಯಕ್ಷ ಲಕ್ಷಣ ಗೌಡ ಬೇರಿಕೆ, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪು, ಸಂಚಾಲಕರಾದ ಟಿ. ಲಿಂಗಪ್ಪ ಗೌಡ, ಬಿ. ರಾಮಚಂದ್ರ ರಾವ್, ಎಂ. ಸುಬ್ರಹ್ಮಣ್ಯ ಮುಂಡುಗಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…