ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠೆ ನಡೆಯಿತು.
ಜ. 27ರಂದು ಮೂರುಕಲ್ಲಡ್ಕದಲ್ಲಿ ಪೂ.9.50ರ ಮೀನ ಲಗ್ನದ ಮುಹೂರ್ತದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಠೆ ನಡೆಯಿತು. ಕಲ್ಲಮಾಡದ ಶುದ್ಧಿ ಕಲಶ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ದೈವಸ್ಥಾನದಲ್ಲಿ 30ರವರೆಗೆ ಅಯ್ಯನಕಟ್ಟೆ ಜಾತ್ರೆ ನಡೆಯಲಿದೆ. ಜ. 28ರಂದು ಬೆಳಗಿನ ಜಾವ 5.00ಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ 7 ಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ, ಗಂಧಪ್ರಸಾದ ವಿತರಣೆ ನಡೆಯಿತು.
ಜ. 26ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8 ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2.00ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ 5ಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…