ಸುಳ್ಯ: ರಾಜಕೀಯ ಮಾಡಿ, ಆದರೆ ಅಭಿವೃದ್ಧಿಯಲ್ಲಿ ಅಲ್ಲ. ಎಲ್ಲಾ ಶಕ್ತಿ ಪ್ರದರ್ಶನ ಮಾಡಿ ತೋರಿಸಿ ಅಭಿವೃದ್ಧಿ ಕಾರ್ಯದಲ್ಲಿ…!. ಇದು ಯಾಕೆ ಹೇಳ್ತಾರೆ ಎಂದರೆ ಅಜ್ಜಾವರ ಗ್ರಾಮದ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆಯನ್ನು ನೋಡಿ.
ಕಳೆದ ಅನೇಕ ವರ್ಷಗಳಿಂದ ಈ ರಸ್ತೆ ಅವ್ಯವಸ್ಥೆ ಇದೆ. ಹಾಗಿದ್ದರೂ ಅಭಿವೃದ್ಧಿಯಾಗಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರು.ಅಜ್ಜಾವರ ಗ್ರಾಮದ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆ ಹಾಗೂ ಮುಳ್ಯ ಕಜೆ ಯಾಗಿ ಪೇರಾಲು ಸೇರುವ ರಸ್ತೆ ತೀರಾ ಅವ್ಯವಸ್ಥೆಯಿಂದ ಕೂಡಿದೆ. ಸಾವಿರಾರು ಮಂದಿ ದಿನವೂ ಓಡಾಡ್ತಾರೆ ಈ ರಸ್ತೆಯಲ್ಲಿ. ಆದರೆ ಅಭಿವೃದ್ಧಿ ಮಾತ್ರಾ ಆಗಿಲ್ಲ. ಹಾಗೆಂದು ಈ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದರೆ ರಾಜಕೀಯ ಸೇರುತ್ತದೆ. ಅಷ್ಟು ಅನುದಾನ ನೀಡಿದೆ, ಇಷ್ಟು ಅನುದಾನ ನೀಡಿದೆ ಎಂದು ರಾಜಕೀಯ ಮಾಡಿ ಮಾತನಾಡುವ ಧ್ವನಿಯನ್ನೇ ಕುಗ್ಗಿಸಲಾಗುತ್ತದೆ ಎಂದು ಸ್ಥಳೀಯರು ವಿಷಾದದಿಂದ ಹೇಳುತ್ತಾರೆ. ಈಗಲೂ ಮತ್ತೆ ಕೇಳುತ್ತಾರೆ, ರಸ್ತೆ ಯಾವಾಗ ದುರಸ್ತಿಯಾಗುತ್ತದೆ…..??
ಯಾವುದಾದರೂ ಒಂದು ರಸ್ತೆಗೆ 50 ಮೀಟರ್ ಕಾಂಕ್ರೀಟ್ ಆದರೆ ತಕ್ಷಣವೇ ಬ್ಯಾನರ್ ಬೀಳುತ್ತದೆ, ಈ ರಸ್ತೆಗೂ ಒಂದು ಬ್ಯಾನರ್ ಹಾಕಿಸಬೇಕು ಎಂದು ಕೆಲವು ಮಂದಿ ಕುಹಕ ಮಾಡುತ್ತಾರೆ. ಬ್ಯಾನರ್ ಪ್ರಿಯರು ಇದನ್ನೂ ಗಮನಿಸಬೇಕು…!
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…