ಸುಳ್ಯ: ರಾಜಕೀಯ ಮಾಡಿ, ಆದರೆ ಅಭಿವೃದ್ಧಿಯಲ್ಲಿ ಅಲ್ಲ. ಎಲ್ಲಾ ಶಕ್ತಿ ಪ್ರದರ್ಶನ ಮಾಡಿ ತೋರಿಸಿ ಅಭಿವೃದ್ಧಿ ಕಾರ್ಯದಲ್ಲಿ…!. ಇದು ಯಾಕೆ ಹೇಳ್ತಾರೆ ಎಂದರೆ ಅಜ್ಜಾವರ ಗ್ರಾಮದ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆಯನ್ನು ನೋಡಿ.
ಕಳೆದ ಅನೇಕ ವರ್ಷಗಳಿಂದ ಈ ರಸ್ತೆ ಅವ್ಯವಸ್ಥೆ ಇದೆ. ಹಾಗಿದ್ದರೂ ಅಭಿವೃದ್ಧಿಯಾಗಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರು.ಅಜ್ಜಾವರ ಗ್ರಾಮದ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆ ಹಾಗೂ ಮುಳ್ಯ ಕಜೆ ಯಾಗಿ ಪೇರಾಲು ಸೇರುವ ರಸ್ತೆ ತೀರಾ ಅವ್ಯವಸ್ಥೆಯಿಂದ ಕೂಡಿದೆ. ಸಾವಿರಾರು ಮಂದಿ ದಿನವೂ ಓಡಾಡ್ತಾರೆ ಈ ರಸ್ತೆಯಲ್ಲಿ. ಆದರೆ ಅಭಿವೃದ್ಧಿ ಮಾತ್ರಾ ಆಗಿಲ್ಲ. ಹಾಗೆಂದು ಈ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದರೆ ರಾಜಕೀಯ ಸೇರುತ್ತದೆ. ಅಷ್ಟು ಅನುದಾನ ನೀಡಿದೆ, ಇಷ್ಟು ಅನುದಾನ ನೀಡಿದೆ ಎಂದು ರಾಜಕೀಯ ಮಾಡಿ ಮಾತನಾಡುವ ಧ್ವನಿಯನ್ನೇ ಕುಗ್ಗಿಸಲಾಗುತ್ತದೆ ಎಂದು ಸ್ಥಳೀಯರು ವಿಷಾದದಿಂದ ಹೇಳುತ್ತಾರೆ. ಈಗಲೂ ಮತ್ತೆ ಕೇಳುತ್ತಾರೆ, ರಸ್ತೆ ಯಾವಾಗ ದುರಸ್ತಿಯಾಗುತ್ತದೆ…..??
ಯಾವುದಾದರೂ ಒಂದು ರಸ್ತೆಗೆ 50 ಮೀಟರ್ ಕಾಂಕ್ರೀಟ್ ಆದರೆ ತಕ್ಷಣವೇ ಬ್ಯಾನರ್ ಬೀಳುತ್ತದೆ, ಈ ರಸ್ತೆಗೂ ಒಂದು ಬ್ಯಾನರ್ ಹಾಕಿಸಬೇಕು ಎಂದು ಕೆಲವು ಮಂದಿ ಕುಹಕ ಮಾಡುತ್ತಾರೆ. ಬ್ಯಾನರ್ ಪ್ರಿಯರು ಇದನ್ನೂ ಗಮನಿಸಬೇಕು…!
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…
ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…