ಅರಂತೋಡು :ಅರಂತೋಡು ಬದ್ರಿಯಾ ಜುಮ್ಮಾಮಸೀದಿ ವತಿಯಿಂದ ಹಜ್ ಯಾತ್ರೆ ಗೆ ತೆರಳಲಿರುವ ಅರಂತೋಡು ಮಸೀದಿಯ ಖತೀಬರಾದ ಇಸಾಕ್ ಬಾಖವಿ, ಪೇರಡ್ಕ ಮಸೀದಿ ಖತೀಬರಾದ ಅಶ್ರಫ್ ಫೈಝಿ ಸುಕಂದಕಟ್ಟೆ,ಪೇರಡ್ಕ ಮದರಸದ ಸದರ್ ಮುಅಲ್ಲಿಂ ಝಕರಿಯಾ ದಾರಿಮಿ,ಅಬ್ದುಲ್ ಹಮೀದ್ಅಡಿಮರಡ್ಕ ರವರಿಗೆ ಬೀಳ್ಕೊಡುಗೆ ಸಮಾರಂಭವು ಅರಂತೋಡು ಮದರಸದ ಹಾಲ್ ನಲ್ಲಿ ನಡೆಯಿತು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಅರಂತೋಡು ಜಮಾಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದರು. ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಸ್ಲಾಂ ಧರ್ಮದ ಐದು ಪುಣ್ಯ ಕಾರ್ಯದಲ್ಲಿ ಹಜ್ಜ್ ಕರ್ಮ ಒಂದಾಗಿದ್ದು .ಹಜ್ಜ್ ಕಾರ್ಯ ನಿರ್ವಹಿಸಲು ಒಲಿದವರು ಭಾಗ್ಯವಂತವರು ಎಂದು ಹೇಳಿದರು.ಈ ಸಂದರ್ಭದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಅಬ್ದುಲಾ ಮಾಸ್ಟರ್ ಪ್ರಸ್ತಾವಿಕ ಭಾಷಣ ಮಾಡಿದರು.
ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್,ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್ ,ನಾಸಿರುದ್ದೀನ್ ಪಠೇಲ್ ಮುಅಸ್ಸಿನ್ ಬಶೀರ್ ದಾರಿಮಿ,ನುಸ್ರತುಲ್ ಇಸ್ಲಾಂ ಮದರಸ ಮ್ಯಾನೇಜ್ಮೆಂಟ್ ಸಂಚಾಲಕ ಕೆ.ಎಮ್ .ಮೂಸಾನ್,ಜಮಾಅತ್ ನ ಮಾಜಿ ಅಧ್ಯಕ್ಷರು ,ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು . ಜಮಾಅತ್ ಕಾರ್ಯದರ್ಶಿ ಅಶ್ರಫ್ ಗುಂಡಿ ಸ್ವಾಗತಿಸಿದರು.ಎ.ಹೆಚ್.ವೈ.ಎ ಕಾರ್ಯದರ್ಶಿ ಫಸಿಲು ವಂದಿಸಿದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…