Advertisement
ಅನುಕ್ರಮ

ಅರಂತೋಡು ಗ್ರಾಮದಲ್ಲಿ ಬಡವಾಯ್ತು ಬಿಎಸ್ಎನ್ಎಲ್….!?

Share

ಬಡವಾಗಿ ಬಿದ್ದ ಬಿಎಸ್ಎನ್ಎಲ್ ಟವರ್….. ಅದಕ್ಕೆ ಹೊಂದಿಕೊಂಡು ತಟಸ್ಥವಾಗಿ ನಿಂತ ಬಿಲ್ಡಿಂಗ್ ನೌಕರನಿಲ್ಲದೆ ಕಣ್ಣೀರಿಡುತ್ತಿದೆ…!

Advertisement

ಹೌದು 21 ವರ್ಷಗಳ ಕಾಲ ಎಲ್ಲರ ನೋಡಿಕೊಂಡ ಅದೇ ಬಿಲ್ಡಿಂಗ್ ಈಗ ಹೇಳದೆ ಕೇಳದೇ ಮೌನವಾಗಿ ಬಿಟ್ಟಿದೆ. ಆ ಟವರ್ ಹಾಗೂ ಏಕಾಂಗಿಯಾಗಿ ನಿಂತ ಬಿಲ್ಡಿಂಗ್ ಇರೋದು ಸುಳ್ಯ ತಾಲೂಕಿನ ಅರಂತೋಡು ಎಂಬ ಪುಟ್ಟ ಗ್ರಾಮದಲ್ಲಿ.

ಸ್ವಚ್ಚ ಪರಿಸರದಲ್ಲಿ ಎಲ್ಲಾ ಅಗತ್ಯತೆಗಳು ಕೈಗೆಟಕುವಂತೆ ಸ್ವತಂತ್ರವಾಗಿ ಗ್ರಾಮ ಅಭಿವೃದ್ಧಿಯಾಗುತ್ತಿದೆ. ಈ ಮಧ್ಯೆ ಅನಾಥವಾದದ್ದು ಮಾತ್ರ ಇಲ್ಲಿಯ ಬಿಎಸ್ಎನ್ಎಲ್ ಬಿಲ್ಡಿಂಗ್.

ಊರ ಜನರು ಮೊದಲೆಲ್ಲಾ ಕರೆಂಟ್ ಇಲ್ಲದೇ ನೆಟ್ವರ್ಕ್ ತಪ್ಪಿತೆಂದರೆ ಸಾಕು ಆಗಾಗ್ಗೆ ಕರೆ ಮಾಡಿ ಬಿಎಸ್ಎನ್ಎಲ್ ಯಾವಾಗ ಸರಿ ಆಗೋದು ಅಂತ ಕೇಳೋದು. ತಲೆ ಪರಚಿಕೊಂಡು ರೇಂಜ್ ಗಾಗಿ ಪರದಾಡೋದು ಏನು. ಆದರೆ ಈಗ ಇದೇ ಬಿಎಸ್ಎನ್ಎಲ್  ಗ್ರಾಮಕ್ಕೆ ಬಡವಾಗಿ ಹೋಯ್ತಾ ?.

ಹೊಸ ರಿಯಾಯಿತಿಗಳಿಗೆ ಮಾರು ಹೋಗಿ ಕೈ ಹಿಡಿದು ಬೆಳೆಸಿದ ಆ ಒಂದು ಹುಟ್ಟು ನೆನಪನ್ನು ಮರೆಯುವಂತಾಯ್ತಾ ?. ಗೊತ್ತಿಲ್ಲ. ಆದರೆ ಹಳ್ಳಿಗರಿಗೆ ಮಾತ್ರ ಈ ಬಿಎಸ್ಎನ್ಎಲ್ ನೆಟ್ವರ್ಕ್ ನ್ನು ತಲುಪಿಸುವಲ್ಲಿ ಹಗಲು ರಾತ್ರಿ ಗುಡುಗು ಸಿಡಿಲಿಗೆ ಭಯ ಬೀಳದೆ ಕತ್ತಲಲ್ಲೂ ಎಚ್ಚೆತ್ತು ಕುಳಿತು ನೆಟ್ವರ್ಕ್ ಸರಿಪಡಿಸುತ್ತಿದ್ದ ಆ ನೌಕರರು…..?? ಯಾರು… ಆ ಶ್ರಮದ ಬೆವರನ್ನು ಕೇಳೋರು ಯಾರು..? ಪ್ರಶ್ನಿಸೋರು ಯಾರು…? ಕೆಲಸಕ್ಕೆ ಸರಿಯಾಗಿ ಸಂಬಳ ದೊರೆಯದೇ ಇದ್ದರೂ ಮತ್ತದೇ ಕೆಲಸದಲ್ಲಿ ಮಗ್ನರಾಗಿ ಬಿಡುವ ಆ ನೌಕರರ ಬದುಕನ್ನ ಯಾರಾದ್ರೂ ಯೋಚನೆ ಮಾಡಿದ್ರಾ..?

ತಿಂಗಳಿಗೆ ಮೂರ್ನಾಲ್ಕು ದಿನ ದೂರದೂರಿಗೆ ಹೋಗಿ ಆ ಬಿಸಿಲಿಗೆ ಒಣಗಿಕೊಂಡು ಕೆಲಸದ ಉಳಿವಿಕೆಗಾಗಿ ಹೋರಾಟ ನಡೆಸುತ್ತಿದ್ದ ಅದೆಷ್ಟೋ ಬಿಎಸ್ಎನ್ಎಲ್ ನೌಕರರ ಕೂಗನ್ನು ಒಬ್ಬರಾದರೂ ಕೇಳಿಸಿಕೊಂಡವ್ರು ಇದ್ದಾರಾ …!. ನೆಟ್ವರ್ಕ್ ಹೋದಾಗ ಆಗಾಗ್ಗೆ ಕರೆ ಮಾಡಿ ಪರಚುತ್ತಿದ್ದವರೆಲ್ಲಿ ?. ಹೌದು..  ಯಾರೂ ಇಲ್ಲ ಉಳಿದದ್ದು ಏಕಾಂಗಿ ಬಿಲ್ಡಿಂಗ್ ಹಾಗೂ ಅದರ ಹತ್ತಿರದ ಬಿಎಸ್ಎನ್ಎಲ್ ಟವರ್, ಜೊತೆಗೆ ನೌಕರರ ನೋವಿನ ಧ್ವನಿ ಮಾತ್ರ.  ಧ್ವನಿ ಎತ್ತಿ ಕೇಳಲು ಒಂದೂ ಧೈರ್ಯದ ಮುಖಗಳಿಲ್ಲ. ಹಳ್ಳಿಗರೆಂದರೆ ಅಮಾಯಕರು ನಿಜ ಆದರೆ ಅಲ್ಲಿ ಕೆಲಸ ಮಾಡುವ ನೌಕರರೂ ಹಗಲು ರಾತ್ರಿಯೆನ್ನದೆ ನಿಷ್ಟೆಯಿಂದ ಕೆಲಸ ಮಾಡುತ್ತಿದ್ದಾರೆ ಅಂತ ಕಂಡೂ ಅವರ ಹೊಟ್ಟೆಗೆ ಮತ್ತೆ ತಣ್ಣೀರ ಬಟ್ಟೆಯೇ ಗತಿಯೆಂದು ಹಾಹಾಕಾರ ನಡೆಸುವ ಅಧಿಕಾರಿಗಳೆಲ್ಲಿ…? ಭಾಷಣದಲ್ಲಿ ಧ್ವನಿ ಎತ್ತಿ ಮಾತಾಡಿ ಚಪ್ಪಾಳೆಗಿಟ್ಟಿಸಿಕೊಳ್ಳೊ ಕೆಲ ರಾಜಕಾರಣಿಗಳಿಗೆ ಈ ಒಂದು ಹಳ್ಳಿಯ ಟವರ್ ಬಡವಾಗಿ ಕಂಡಿತಾ…? ಯಾಕೆ ಸ್ವಾಮಿ….! ಪೆಟ್ಟು ತಿಂದವರಿಗೇ ಪೆಟ್ಟು ಕೊಡೋದು…. ಹೇಳೋರು ಕೇಳೋರು ಇಲ್ಲ ಅಂತ ನೌಕರರ ಹೊಟ್ಟೆಪಾಡನ್ನು ಯಾಕೆ ಕಸಿದುಕೊಳ್ಳೋದು ಅಂತ ಕೇಳಿಯೇ ಬಿಟ್ಟರೆಂದರೆ, ಇಲ್ಲ ಸಲ್ಲದ ಆರೋಪದಲ್ಲಿ ಒಳಗೆ ಹಾಕಿಸೋ ಪ್ಲಾನ್ ಬೇರೆ.
ಇದು ಅರಂತೋಡಿನಂತಹ ಗ್ರಾಮದಲ್ಲಿ ಅಲ್ಲ ಇನ್ನು ಕೆಲ ಹಳ್ಳಿ ಪ್ರದೇಶದಲ್ಲೂ ಅಷ್ಟೇ ಬಿಎಸ್ಎನ್ಎಲ್ ನೆಟ್ವರ್ಕ್ ನ್ನೇ ನಂಬಿ ಬದುಕಿದವರಿಗೀಗ ಅದರ ಸೌಲಭ್ಯತೆಗಳೇ ಸಿಗುತ್ತಿಲ್ಲ. ನೌಕರರು ಪಾಪ ಸಂಬಳವಿಲ್ಲದೆ ಉದ್ಯೋಗದಲ್ಲಿ ಆಸಕ್ತರಿದ್ದರೂ ಕೈ ಚೆಲ್ಲಿ ಕುಳಿತುಕೊಳ್ಳುವಂತಹಾ ಪರಿಸ್ಥಿತಿ ಬಂದೊದಗಿದೆ.

ಇಂತಹಾ ಅದೆಷ್ಟೋ ನೌಕರರ ಕೂಗನ್ನು ಕೇಳುವವರೂ ಇಲ್ಲ, ಕೇಳಿಸಿದರೂ ಅದಕ್ಕೆ ಪರಿಹಾರೋಪಾಯವನ್ನು ನೀಡುವವರು ಇಲ್ಲ. ಕಣ್ಣಿಗೆ ಬಟ್ಟೆ ಕಟ್ಟಿ ಕತ್ತಲ ಸಾಮ್ರಾಜ್ಯದಲ್ಲಿ ಆಡಿ ಉಳಿಯುವ ಪರಿಸ್ಥಿತಿ ಇದೀಗ ಹಳ್ಳಿಗಳಲ್ಲಿ ಅಳಿದುಳಿದ ಬಿಎಸ್ಎನ್ಎಲ್ ನದ್ದಾಗಿದೆ.

* ಲಿಖಿತಾ ಗುಡ್ಡೆಮನೆ, ಪತ್ರಿಕೋದ್ಯಮ ವಿದ್ಯಾರ್ಥಿನಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

10 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

16 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

20 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

20 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago