Advertisement
ಅನುಕ್ರಮ

ಅರಂತೋಡು ಗ್ರಾಮದಲ್ಲಿ ಬಡವಾಯ್ತು ಬಿಎಸ್ಎನ್ಎಲ್….!?

Share

ಬಡವಾಗಿ ಬಿದ್ದ ಬಿಎಸ್ಎನ್ಎಲ್ ಟವರ್….. ಅದಕ್ಕೆ ಹೊಂದಿಕೊಂಡು ತಟಸ್ಥವಾಗಿ ನಿಂತ ಬಿಲ್ಡಿಂಗ್ ನೌಕರನಿಲ್ಲದೆ ಕಣ್ಣೀರಿಡುತ್ತಿದೆ…!

ಹೌದು 21 ವರ್ಷಗಳ ಕಾಲ ಎಲ್ಲರ ನೋಡಿಕೊಂಡ ಅದೇ ಬಿಲ್ಡಿಂಗ್ ಈಗ ಹೇಳದೆ ಕೇಳದೇ ಮೌನವಾಗಿ ಬಿಟ್ಟಿದೆ. ಆ ಟವರ್ ಹಾಗೂ ಏಕಾಂಗಿಯಾಗಿ ನಿಂತ ಬಿಲ್ಡಿಂಗ್ ಇರೋದು ಸುಳ್ಯ ತಾಲೂಕಿನ ಅರಂತೋಡು ಎಂಬ ಪುಟ್ಟ ಗ್ರಾಮದಲ್ಲಿ.

Advertisement

ಸ್ವಚ್ಚ ಪರಿಸರದಲ್ಲಿ ಎಲ್ಲಾ ಅಗತ್ಯತೆಗಳು ಕೈಗೆಟಕುವಂತೆ ಸ್ವತಂತ್ರವಾಗಿ ಗ್ರಾಮ ಅಭಿವೃದ್ಧಿಯಾಗುತ್ತಿದೆ. ಈ ಮಧ್ಯೆ ಅನಾಥವಾದದ್ದು ಮಾತ್ರ ಇಲ್ಲಿಯ ಬಿಎಸ್ಎನ್ಎಲ್ ಬಿಲ್ಡಿಂಗ್.

ಊರ ಜನರು ಮೊದಲೆಲ್ಲಾ ಕರೆಂಟ್ ಇಲ್ಲದೇ ನೆಟ್ವರ್ಕ್ ತಪ್ಪಿತೆಂದರೆ ಸಾಕು ಆಗಾಗ್ಗೆ ಕರೆ ಮಾಡಿ ಬಿಎಸ್ಎನ್ಎಲ್ ಯಾವಾಗ ಸರಿ ಆಗೋದು ಅಂತ ಕೇಳೋದು. ತಲೆ ಪರಚಿಕೊಂಡು ರೇಂಜ್ ಗಾಗಿ ಪರದಾಡೋದು ಏನು. ಆದರೆ ಈಗ ಇದೇ ಬಿಎಸ್ಎನ್ಎಲ್  ಗ್ರಾಮಕ್ಕೆ ಬಡವಾಗಿ ಹೋಯ್ತಾ ?.

Advertisement

ಹೊಸ ರಿಯಾಯಿತಿಗಳಿಗೆ ಮಾರು ಹೋಗಿ ಕೈ ಹಿಡಿದು ಬೆಳೆಸಿದ ಆ ಒಂದು ಹುಟ್ಟು ನೆನಪನ್ನು ಮರೆಯುವಂತಾಯ್ತಾ ?. ಗೊತ್ತಿಲ್ಲ. ಆದರೆ ಹಳ್ಳಿಗರಿಗೆ ಮಾತ್ರ ಈ ಬಿಎಸ್ಎನ್ಎಲ್ ನೆಟ್ವರ್ಕ್ ನ್ನು ತಲುಪಿಸುವಲ್ಲಿ ಹಗಲು ರಾತ್ರಿ ಗುಡುಗು ಸಿಡಿಲಿಗೆ ಭಯ ಬೀಳದೆ ಕತ್ತಲಲ್ಲೂ ಎಚ್ಚೆತ್ತು ಕುಳಿತು ನೆಟ್ವರ್ಕ್ ಸರಿಪಡಿಸುತ್ತಿದ್ದ ಆ ನೌಕರರು…..?? ಯಾರು… ಆ ಶ್ರಮದ ಬೆವರನ್ನು ಕೇಳೋರು ಯಾರು..? ಪ್ರಶ್ನಿಸೋರು ಯಾರು…? ಕೆಲಸಕ್ಕೆ ಸರಿಯಾಗಿ ಸಂಬಳ ದೊರೆಯದೇ ಇದ್ದರೂ ಮತ್ತದೇ ಕೆಲಸದಲ್ಲಿ ಮಗ್ನರಾಗಿ ಬಿಡುವ ಆ ನೌಕರರ ಬದುಕನ್ನ ಯಾರಾದ್ರೂ ಯೋಚನೆ ಮಾಡಿದ್ರಾ..?

ತಿಂಗಳಿಗೆ ಮೂರ್ನಾಲ್ಕು ದಿನ ದೂರದೂರಿಗೆ ಹೋಗಿ ಆ ಬಿಸಿಲಿಗೆ ಒಣಗಿಕೊಂಡು ಕೆಲಸದ ಉಳಿವಿಕೆಗಾಗಿ ಹೋರಾಟ ನಡೆಸುತ್ತಿದ್ದ ಅದೆಷ್ಟೋ ಬಿಎಸ್ಎನ್ಎಲ್ ನೌಕರರ ಕೂಗನ್ನು ಒಬ್ಬರಾದರೂ ಕೇಳಿಸಿಕೊಂಡವ್ರು ಇದ್ದಾರಾ …!. ನೆಟ್ವರ್ಕ್ ಹೋದಾಗ ಆಗಾಗ್ಗೆ ಕರೆ ಮಾಡಿ ಪರಚುತ್ತಿದ್ದವರೆಲ್ಲಿ ?. ಹೌದು..  ಯಾರೂ ಇಲ್ಲ ಉಳಿದದ್ದು ಏಕಾಂಗಿ ಬಿಲ್ಡಿಂಗ್ ಹಾಗೂ ಅದರ ಹತ್ತಿರದ ಬಿಎಸ್ಎನ್ಎಲ್ ಟವರ್, ಜೊತೆಗೆ ನೌಕರರ ನೋವಿನ ಧ್ವನಿ ಮಾತ್ರ.  ಧ್ವನಿ ಎತ್ತಿ ಕೇಳಲು ಒಂದೂ ಧೈರ್ಯದ ಮುಖಗಳಿಲ್ಲ. ಹಳ್ಳಿಗರೆಂದರೆ ಅಮಾಯಕರು ನಿಜ ಆದರೆ ಅಲ್ಲಿ ಕೆಲಸ ಮಾಡುವ ನೌಕರರೂ ಹಗಲು ರಾತ್ರಿಯೆನ್ನದೆ ನಿಷ್ಟೆಯಿಂದ ಕೆಲಸ ಮಾಡುತ್ತಿದ್ದಾರೆ ಅಂತ ಕಂಡೂ ಅವರ ಹೊಟ್ಟೆಗೆ ಮತ್ತೆ ತಣ್ಣೀರ ಬಟ್ಟೆಯೇ ಗತಿಯೆಂದು ಹಾಹಾಕಾರ ನಡೆಸುವ ಅಧಿಕಾರಿಗಳೆಲ್ಲಿ…? ಭಾಷಣದಲ್ಲಿ ಧ್ವನಿ ಎತ್ತಿ ಮಾತಾಡಿ ಚಪ್ಪಾಳೆಗಿಟ್ಟಿಸಿಕೊಳ್ಳೊ ಕೆಲ ರಾಜಕಾರಣಿಗಳಿಗೆ ಈ ಒಂದು ಹಳ್ಳಿಯ ಟವರ್ ಬಡವಾಗಿ ಕಂಡಿತಾ…? ಯಾಕೆ ಸ್ವಾಮಿ….! ಪೆಟ್ಟು ತಿಂದವರಿಗೇ ಪೆಟ್ಟು ಕೊಡೋದು…. ಹೇಳೋರು ಕೇಳೋರು ಇಲ್ಲ ಅಂತ ನೌಕರರ ಹೊಟ್ಟೆಪಾಡನ್ನು ಯಾಕೆ ಕಸಿದುಕೊಳ್ಳೋದು ಅಂತ ಕೇಳಿಯೇ ಬಿಟ್ಟರೆಂದರೆ, ಇಲ್ಲ ಸಲ್ಲದ ಆರೋಪದಲ್ಲಿ ಒಳಗೆ ಹಾಕಿಸೋ ಪ್ಲಾನ್ ಬೇರೆ.
ಇದು ಅರಂತೋಡಿನಂತಹ ಗ್ರಾಮದಲ್ಲಿ ಅಲ್ಲ ಇನ್ನು ಕೆಲ ಹಳ್ಳಿ ಪ್ರದೇಶದಲ್ಲೂ ಅಷ್ಟೇ ಬಿಎಸ್ಎನ್ಎಲ್ ನೆಟ್ವರ್ಕ್ ನ್ನೇ ನಂಬಿ ಬದುಕಿದವರಿಗೀಗ ಅದರ ಸೌಲಭ್ಯತೆಗಳೇ ಸಿಗುತ್ತಿಲ್ಲ. ನೌಕರರು ಪಾಪ ಸಂಬಳವಿಲ್ಲದೆ ಉದ್ಯೋಗದಲ್ಲಿ ಆಸಕ್ತರಿದ್ದರೂ ಕೈ ಚೆಲ್ಲಿ ಕುಳಿತುಕೊಳ್ಳುವಂತಹಾ ಪರಿಸ್ಥಿತಿ ಬಂದೊದಗಿದೆ.

Advertisement

ಇಂತಹಾ ಅದೆಷ್ಟೋ ನೌಕರರ ಕೂಗನ್ನು ಕೇಳುವವರೂ ಇಲ್ಲ, ಕೇಳಿಸಿದರೂ ಅದಕ್ಕೆ ಪರಿಹಾರೋಪಾಯವನ್ನು ನೀಡುವವರು ಇಲ್ಲ. ಕಣ್ಣಿಗೆ ಬಟ್ಟೆ ಕಟ್ಟಿ ಕತ್ತಲ ಸಾಮ್ರಾಜ್ಯದಲ್ಲಿ ಆಡಿ ಉಳಿಯುವ ಪರಿಸ್ಥಿತಿ ಇದೀಗ ಹಳ್ಳಿಗಳಲ್ಲಿ ಅಳಿದುಳಿದ ಬಿಎಸ್ಎನ್ಎಲ್ ನದ್ದಾಗಿದೆ.

* ಲಿಖಿತಾ ಗುಡ್ಡೆಮನೆ, ಪತ್ರಿಕೋದ್ಯಮ ವಿದ್ಯಾರ್ಥಿನಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

24 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago