ಸುಳ್ಯ: ಗ್ರಾಮೀಣ ಜನರ ಆರ್ಥಿಕ ಮಟ್ಟ ಹಾಗೂ ಜೀವನ ಭದ್ರತೆಗೆ ಸಹಕಾರಿ ಸಂಘಗಳ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.
ಅವರು ಶನಿವಾರ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡು ದಿನಗಳ ಶತ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರಕಾರಗಳು ಯಾವುದೇ ಕೆಲಸ ಮಾಡಿದರೂ ಜನರ ಸಹಭಾಗಿತ್ವ ಇದ್ದರೆ ಮಾತ್ರಾ ಯಶಸ್ಸಾಗುತ್ತದೆ. ಆದರೆ ಸಹಕಾರಿ ಸಂಘಗಳು ಯಾವುದೇ ಕೆಲಸ ಮಾಡಿದರೂ ಅದು ಜನರ ಭಾಗವಾಗಿರುತ್ತದೆ ಹಾಗಾಗಿ ಯಶಸ್ಸು ಸಾಧ್ಯವಾಗುತ್ತದೆ ಎಂದರು.
ಈ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದ ಗಿರೀಶ್ ಭಾರದ್ವಾಜ್ ಮತ್ತು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ಕುಮಾರ್ ಕಟೀಲ್, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ, ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ್ ಭಾಗವಹಿಸಿದರು.
ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…