Advertisement
ಕಾರ್ಯಕ್ರಮಗಳು

ಅರಂತೋಡು ಮಸೀದಿಯಲ್ಲಿ ಈದ್ ಮಿಲಾದ್ ಫೆಸ್ಟಿವಲ್‌ ಸಮಾರೋಪ ಸಮಾರಂಭ

Share

ಸುಳ್ಯ: ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ (ರಿ)ವತಿಯಿಂದ ನ.10ರಂದು ಈದ್ ಮಿಲಾದ್ ಫೆಸ್ಟಿವಲ್‌ ಕಾರ್ಯಕ್ರಮದ ಸಮಾರೋಪ ಸಮಾರಂಭ ಅರಂತೋಡು ಮಸೀದಿ ವಠಾರದಲ್ಲಿ ನಡೆಯಿತು.

ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಧ್ವಜಾರೋಹಣ ನೇರವೆರಿಸಿದ್ದರು. ಬಳಿಕ ಮಿಲಾದ್ ಜಾಥಾವು ಮಸೀದಿಯಿಂದ ಹೊರಟು ತೆಕ್ಕಿಲ್ ಟಿ.ಎಮ್ ಶಹೀದ್ ನಿವಾಸಕ್ಕೆ ತೆರಳಿ ಅಲ್ಲಿಂದ ಉದಯನಗರದವರೆಗೆ ಸಂಚರಿಸಿ ಮಸೀದಿ ಬಳಿ ಸಮಾಪ್ತಿಗೊಂಡಿತ್ತು. ದಾರಿ ಉದ್ದಕ್ಕೂಸಿಹಿ ತಿಂಡಿ ನೀಡಿ ಸಹಕರಿಸಿದರು. ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ರವರು ಅಧ್ಯಕ್ಷತೆ ವಹಿಸಿದ್ದರು.

ನಂತರ ಮದರಸ ವಿದ್ಯಾರ್ಥಿಗಳಿಂದ ಇಸ್ಲಾಮಿಕ್ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ದಫ್ ಸ್ಪರ್ಧೆ, ಹಾಡು, ಭಾಷಣಗಳ ಸ್ಪರ್ಧೆಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮವನ್ನು ನವಾಜ್ ದಾರಿಮಿ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಅಧ್ಯಾಪಕರಾದ ಬಹು ನವಾಜ್ ದಾರಿಮಿ, ಸಹ ಅಧ್ಯಾಪಕರಾದ ಬಶೀರ್ ದಾರಿಮಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಟಿ.ಎಮ್ ಬಾಬ ಹಾಜಿ ತೆಕ್ಕಿಲ್, ಎನ್ ಐ. ಮದರಸ ಮ್ಯಾನೇಜ್‌ಮೆಂಟ್ ಸಂಚಾಲಕ ಮೂಸಾನ್ ಕೆ.ಎಮ್, ಹಾಜಿ ಎಸ್.ಇ.ಮಹಮ್ಮದ್, ಅರಂತೋಡು ಜಮಾಅತ್ ಕಾರ್ಯದರ್ಶಿ ಅಶ್ರಫ್ ಗುಂಡಿ, ಮಾಜಿ ಅಧ್ಯಕ್ಷರಾದ ಹಾಜಿ ಅಹ್ಮದ್ ಪಠೇಲ್ ಅನಿವಾಸಿ ಭಾರತೀಯರಾದ ಬದುರುದ್ದೀನ್ ಪಠೇಲ್, ಜಾವೇದ್ ಪೆಲ್ತಡ್ಕ, ಅಶ್ರಫ್ ಅದೂರು, ಸಮದ್ ಗುಂಡಿ, ವಹಾಬ್ ಕುಕ್ಕುಂಬಳ, ಅರಂತೋಡು ಶಾಖೆ ಅಧ್ಯಕ್ಷ ಆಶೀಕ್ ಕುಕ್ಕುಂಬಳ, ಎಸೋಸಿಯೆಶನ್ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಕಾರ್ಯದರ್ಶಿ ಫಸೀಲು , ಹನೀಫ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಮಜೀದ್ ಸ್ವಾಗತಿಸಿ, ಅಶ್ರಫ್ ಗುಂಡಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

10 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

11 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

18 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

23 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 days ago