ಸುಳ್ಯ: ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ (ರಿ)ವತಿಯಿಂದ ನ.10ರಂದು ಈದ್ ಮಿಲಾದ್ ಫೆಸ್ಟಿವಲ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಅರಂತೋಡು ಮಸೀದಿ ವಠಾರದಲ್ಲಿ ನಡೆಯಿತು.
ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಧ್ವಜಾರೋಹಣ ನೇರವೆರಿಸಿದ್ದರು. ಬಳಿಕ ಮಿಲಾದ್ ಜಾಥಾವು ಮಸೀದಿಯಿಂದ ಹೊರಟು ತೆಕ್ಕಿಲ್ ಟಿ.ಎಮ್ ಶಹೀದ್ ನಿವಾಸಕ್ಕೆ ತೆರಳಿ ಅಲ್ಲಿಂದ ಉದಯನಗರದವರೆಗೆ ಸಂಚರಿಸಿ ಮಸೀದಿ ಬಳಿ ಸಮಾಪ್ತಿಗೊಂಡಿತ್ತು. ದಾರಿ ಉದ್ದಕ್ಕೂಸಿಹಿ ತಿಂಡಿ ನೀಡಿ ಸಹಕರಿಸಿದರು. ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ರವರು ಅಧ್ಯಕ್ಷತೆ ವಹಿಸಿದ್ದರು.
ನಂತರ ಮದರಸ ವಿದ್ಯಾರ್ಥಿಗಳಿಂದ ಇಸ್ಲಾಮಿಕ್ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ದಫ್ ಸ್ಪರ್ಧೆ, ಹಾಡು, ಭಾಷಣಗಳ ಸ್ಪರ್ಧೆಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮವನ್ನು ನವಾಜ್ ದಾರಿಮಿ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಅಧ್ಯಾಪಕರಾದ ಬಹು ನವಾಜ್ ದಾರಿಮಿ, ಸಹ ಅಧ್ಯಾಪಕರಾದ ಬಶೀರ್ ದಾರಿಮಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಟಿ.ಎಮ್ ಬಾಬ ಹಾಜಿ ತೆಕ್ಕಿಲ್, ಎನ್ ಐ. ಮದರಸ ಮ್ಯಾನೇಜ್ಮೆಂಟ್ ಸಂಚಾಲಕ ಮೂಸಾನ್ ಕೆ.ಎಮ್, ಹಾಜಿ ಎಸ್.ಇ.ಮಹಮ್ಮದ್, ಅರಂತೋಡು ಜಮಾಅತ್ ಕಾರ್ಯದರ್ಶಿ ಅಶ್ರಫ್ ಗುಂಡಿ, ಮಾಜಿ ಅಧ್ಯಕ್ಷರಾದ ಹಾಜಿ ಅಹ್ಮದ್ ಪಠೇಲ್ ಅನಿವಾಸಿ ಭಾರತೀಯರಾದ ಬದುರುದ್ದೀನ್ ಪಠೇಲ್, ಜಾವೇದ್ ಪೆಲ್ತಡ್ಕ, ಅಶ್ರಫ್ ಅದೂರು, ಸಮದ್ ಗುಂಡಿ, ವಹಾಬ್ ಕುಕ್ಕುಂಬಳ, ಅರಂತೋಡು ಶಾಖೆ ಅಧ್ಯಕ್ಷ ಆಶೀಕ್ ಕುಕ್ಕುಂಬಳ, ಎಸೋಸಿಯೆಶನ್ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಕಾರ್ಯದರ್ಶಿ ಫಸೀಲು , ಹನೀಫ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಮಜೀದ್ ಸ್ವಾಗತಿಸಿ, ಅಶ್ರಫ್ ಗುಂಡಿ ವಂದಿಸಿದರು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…