ಸುಳ್ಯ: ಸುಳ್ಯ ಸಮೀಪದ ಅರಂಬೂರಿನಲ್ಲಿ ಭಾನುವಾರ ಬೆಳಗ್ಗೆ ಕಾರು ಹಾಗೂ ಬಸ್ಸು ಡಿಕ್ಕಿಯಾಗಿ 3 ಮಂದಿ ಸಾವನ್ನಪ್ಪಿದ್ದಾರೆ.
ಸುಳ್ಯದ ಅರಂಬೂರು ಬಳಿ ರಿಕ್ಷಾವನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಕಾರು ಹಾಗೂ ಬಸ್ಸು ಢಿಕ್ಕಿಯಾಗಿದೆ. ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು. ಗಂಭೀರ ಗಾಯಗೊಂಡಿದ್ದ ಸೋಮಣ್ಣ ಮತ್ತು ನಾಗೇಂದ್ರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸು ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೃತರೆಲ್ಲರೂ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆಯವರು. ಕಾರಿನಲ್ಲಿ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಅವರಿಗೆ ಗಾಯವಾಗಿದೆ. ಅಪಘಾತವಾದ ತಕ್ಷಣ ಸ್ಥಳೀಯರು ಸರಕಾರಿ ಆಸ್ಪತ್ರೆಗೆ ಕರೆತಂದರು.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…