ಸುಳ್ಯ: ಸುಳ್ಯ ಸಮೀಪದ ಅರಂಬೂರಿನಲ್ಲಿ ಭಾನುವಾರ ಬೆಳಗ್ಗೆ ಕಾರು ಹಾಗೂ ಬಸ್ಸು ಡಿಕ್ಕಿಯಾಗಿ 3 ಮಂದಿ ಸಾವನ್ನಪ್ಪಿದ್ದಾರೆ.
ಸುಳ್ಯದ ಅರಂಬೂರು ಬಳಿ ರಿಕ್ಷಾವನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಕಾರು ಹಾಗೂ ಬಸ್ಸು ಢಿಕ್ಕಿಯಾಗಿದೆ. ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು. ಗಂಭೀರ ಗಾಯಗೊಂಡಿದ್ದ ಸೋಮಣ್ಣ ಮತ್ತು ನಾಗೇಂದ್ರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸು ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೃತರೆಲ್ಲರೂ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆಯವರು. ಕಾರಿನಲ್ಲಿ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಅವರಿಗೆ ಗಾಯವಾಗಿದೆ. ಅಪಘಾತವಾದ ತಕ್ಷಣ ಸ್ಥಳೀಯರು ಸರಕಾರಿ ಆಸ್ಪತ್ರೆಗೆ ಕರೆತಂದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.