ಸುಳ್ಯ: ಸುಳ್ಯ ಸಮೀಪದ ಅರಂಬೂರಿನಲ್ಲಿ ಭಾನುವಾರ ಬೆಳಗ್ಗೆ ಕಾರು ಹಾಗೂ ಬಸ್ಸು ಡಿಕ್ಕಿಯಾಗಿ 3 ಮಂದಿ ಸಾವನ್ನಪ್ಪಿದ್ದಾರೆ.
ಸುಳ್ಯದ ಅರಂಬೂರು ಬಳಿ ರಿಕ್ಷಾವನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಕಾರು ಹಾಗೂ ಬಸ್ಸು ಢಿಕ್ಕಿಯಾಗಿದೆ. ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು. ಗಂಭೀರ ಗಾಯಗೊಂಡಿದ್ದ ಸೋಮಣ್ಣ ಮತ್ತು ನಾಗೇಂದ್ರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸು ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೃತರೆಲ್ಲರೂ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆಯವರು. ಕಾರಿನಲ್ಲಿ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಅವರಿಗೆ ಗಾಯವಾಗಿದೆ. ಅಪಘಾತವಾದ ತಕ್ಷಣ ಸ್ಥಳೀಯರು ಸರಕಾರಿ ಆಸ್ಪತ್ರೆಗೆ ಕರೆತಂದರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…