ಸುಳ್ಯ: ಸುಳ್ಯ ಸಮೀಪದ ಅರಂಬೂರಿನಲ್ಲಿ ಭಾನುವಾರ ಬೆಳಗ್ಗೆ ಕಾರು ಹಾಗೂ ಬಸ್ಸು ಡಿಕ್ಕಿಯಾಗಿ 3 ಮಂದಿ ಸಾವನ್ನಪ್ಪಿದ್ದಾರೆ.
ಸುಳ್ಯದ ಅರಂಬೂರು ಬಳಿ ರಿಕ್ಷಾವನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಕಾರು ಹಾಗೂ ಬಸ್ಸು ಢಿಕ್ಕಿಯಾಗಿದೆ. ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು. ಗಂಭೀರ ಗಾಯಗೊಂಡಿದ್ದ ಸೋಮಣ್ಣ ಮತ್ತು ನಾಗೇಂದ್ರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸು ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೃತರೆಲ್ಲರೂ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆಯವರು. ಕಾರಿನಲ್ಲಿ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಅವರಿಗೆ ಗಾಯವಾಗಿದೆ. ಅಪಘಾತವಾದ ತಕ್ಷಣ ಸ್ಥಳೀಯರು ಸರಕಾರಿ ಆಸ್ಪತ್ರೆಗೆ ಕರೆತಂದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…