Advertisement
ಸುದ್ದಿಗಳು

ಅರಂಬೂರು ಸೇತುವೆ ಕಾಮಗಾರಿ ಆರಂಭಿಸಿ 3 ವರ್ಷ….! ಅಧಿಕಾರಿಗಳೇ…ಶಾಸಕರೇ…..ಸ್ವಲ್ಪ ಈ ಕಡೆ ಗಮನಿಸಿದರೆ ಬೆಸ್ಟ್…..

Share

ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ,  ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ.  ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

13 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

14 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

17 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

21 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

21 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago