ಸುದ್ದಿಗಳು

ಅರಂಬೂರು ಸೇತುವೆ ಕಾಮಗಾರಿ ಆರಂಭಿಸಿ 3 ವರ್ಷ….! ಅಧಿಕಾರಿಗಳೇ…ಶಾಸಕರೇ…..ಸ್ವಲ್ಪ ಈ ಕಡೆ ಗಮನಿಸಿದರೆ ಬೆಸ್ಟ್…..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ,  ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Advertisement
Advertisement

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ.  ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

4 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

13 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

13 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

13 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

14 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

14 hours ago