ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ, ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ. ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…