Advertisement
ಸುದ್ದಿಗಳು

ಅರಂಬೂರು ಸೇತುವೆ ಕಾಮಗಾರಿ ಆರಂಭಿಸಿ 3 ವರ್ಷ….! ಅಧಿಕಾರಿಗಳೇ…ಶಾಸಕರೇ…..ಸ್ವಲ್ಪ ಈ ಕಡೆ ಗಮನಿಸಿದರೆ ಬೆಸ್ಟ್…..

Share

ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ,  ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ.  ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

6 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago