ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ, ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ. ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…