ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ, ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ. ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…