Advertisement
ಸುದ್ದಿಗಳು

ಅರಂಬೂರು ಸೇತುವೆ ಕಾಮಗಾರಿ ಆರಂಭಿಸಿ 3 ವರ್ಷ….! ಅಧಿಕಾರಿಗಳೇ…ಶಾಸಕರೇ…..ಸ್ವಲ್ಪ ಈ ಕಡೆ ಗಮನಿಸಿದರೆ ಬೆಸ್ಟ್…..

Share

ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ,  ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ.  ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

5 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

6 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

7 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago