ಅರಣ್ಯ ಇಲಾಖಾ ಸಿಬಂದಿಗಳಿಂದ ಹಲ್ಲೆ ಆರೋಪ : ನಾಗರಿಕರಿಂದ ಪ್ರತಿಭಟನೆ

September 21, 2019
7:49 PM

ಸುಬ್ರಹ್ಮಣ್ಯ: ಕಡಬ ತಾಲೂಕು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೊಕೇಶ್ ಎಂಬವರ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ನೀತಿ ತಂಡದ ನೇತೃತ್ವದಲ್ಲಿ ಸುಬ್ರಹ್ಮಣ್ಯ ಸಮೀಪ ಕೆಂಜಳದ ಅರಣ್ಯ ಇಲಾಖೆಯ ಕಚೇರಿಯ ಮುಂದೆ  ಪ್ರತಿಭಟನೆ ನಡೆಯಿತು.

Advertisement
Advertisement

ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು, ಈ ಮರಗಳನ್ನು ಲೋಕೇಶ್ ಎಂಬವರು ಕಳವು ನಡೆಸಿದ್ದಾರೆಂದು ಆರೋಪಿಸಿ ಲೋಕೇಶ್ ಅವರನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿ, ಅವರಿಗೆ 25ಸಾವಿರ ದಂಡ ವಿಧಿಸಿದ್ದರು. ಈ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಹಲ್ಲೆ ಖಂಡಿಸಿ ಶನಿವಾರ  ಕೆಂಜಾಳದಲ್ಲಿ ನಾಗರಿಕರಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ  ಮಾತನಾಡಿದ ನೀತಿ ತಂಡದ ಅಧ್ಯಕ್ಷರು ಹಾಗೂ ಗ್ರಾಮಸ್ಥರು, ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ್ ಎಂಬವರು ನಿರಾಪರಾಧಿಯಾಗಿದ್ದು ಅವರ ಮೇಲೆ ವಿನಾಃ ಕಾರಣ ಹಲ್ಲೆ ನಡೆಸಲಾಗಿದೆ, ಭಾಗಿಮಲೆ ಮೀಸಲು ಅರಣ್ಯದಲ್ಲಿ ಬೃಹತ್ ಗಾತ್ರದ ಮರ ಕಳವು ನಡೆದಿದ್ದು ಇದರ ಹಿಂದೆ ದೊಡ್ಡ ಜಾಲವಿರುವ ಬಗ್ಗೆ ಸಂಶಯವಿದೆ. ಆದರೆ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಅಮಾಯಕನ ಮೇಲೆ ದಂಡ ವಿಧಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.ಲೋಕೇಶ್ ಅವರಿಗೆ ಹಲ್ಲೆ ನಡೆಸಿದ  ಅರಣ್ಯ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡುವಂತೆ ಪ್ರತಿಭಟನಾಕಾರು ಆಗ್ರಹಿಸಿದ್ದಾರೆ.

ಇದಕ್ಕೆ ಒಂದು ವಾರದ ಗಡುವನ್ನು ಪ್ರತಿಭಟನಾಕಾರರು ನೀಡಿದರು. ಇಲ್ಲದೇ ಹೋದಲ್ಲಿ ಮುಂದಿನ ಸೋಮವಾರ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಮಾತ್ರವಲ್ಲದೆ ಈ ಮಧ್ಯೆ ನೀತಿ ತಂಡದಿಂದ ಬೆಂಗಳೂರು ಮಾನವ ಹಕ್ಕುಗಳ ಕಚೇರಿಗೂ ದೂರು ಕೂಡ ನೀಡಲಾಗಿದೆ.

ಜಿಲ್ಲಾ ಅರಣ್ಯ ಅಧಿಕಾರಿಗಳ ಆದೇಶದಂತೆ ಸ್ಥಳಕ್ಕೆ ಬಂದ ವಲಯ ಅರಣ್ಯ ಅಧಿಕಾರಿ ಶಿವಾನಂದ  ಅವರಿಗೆ ಮನವಿ ಸಲ್ಲಿಸಲಾಗಿದೆ. ಅರಣ್ಯ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಲಾಯಿತು.  ಪ್ರತಿಭಟನೆಯಲ್ಲಿ ಹೆಚ್ಚಿನ  ಗ್ರಾಮಸ್ಥರು, ತಂಡದ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror