Advertisement
ಸುದ್ದಿಗಳು

ಅರಣ್ಯ ಇಲಾಖಾ ಸಿಬಂದಿಗಳಿಂದ ಹಲ್ಲೆ ಆರೋಪ : ನಾಗರಿಕರಿಂದ ಪ್ರತಿಭಟನೆ

Share

ಸುಬ್ರಹ್ಮಣ್ಯ: ಕಡಬ ತಾಲೂಕು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೊಕೇಶ್ ಎಂಬವರ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ನೀತಿ ತಂಡದ ನೇತೃತ್ವದಲ್ಲಿ ಸುಬ್ರಹ್ಮಣ್ಯ ಸಮೀಪ ಕೆಂಜಳದ ಅರಣ್ಯ ಇಲಾಖೆಯ ಕಚೇರಿಯ ಮುಂದೆ  ಪ್ರತಿಭಟನೆ ನಡೆಯಿತು.

ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು, ಈ ಮರಗಳನ್ನು ಲೋಕೇಶ್ ಎಂಬವರು ಕಳವು ನಡೆಸಿದ್ದಾರೆಂದು ಆರೋಪಿಸಿ ಲೋಕೇಶ್ ಅವರನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿ, ಅವರಿಗೆ 25ಸಾವಿರ ದಂಡ ವಿಧಿಸಿದ್ದರು. ಈ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಹಲ್ಲೆ ಖಂಡಿಸಿ ಶನಿವಾರ  ಕೆಂಜಾಳದಲ್ಲಿ ನಾಗರಿಕರಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ  ಮಾತನಾಡಿದ ನೀತಿ ತಂಡದ ಅಧ್ಯಕ್ಷರು ಹಾಗೂ ಗ್ರಾಮಸ್ಥರು, ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ್ ಎಂಬವರು ನಿರಾಪರಾಧಿಯಾಗಿದ್ದು ಅವರ ಮೇಲೆ ವಿನಾಃ ಕಾರಣ ಹಲ್ಲೆ ನಡೆಸಲಾಗಿದೆ, ಭಾಗಿಮಲೆ ಮೀಸಲು ಅರಣ್ಯದಲ್ಲಿ ಬೃಹತ್ ಗಾತ್ರದ ಮರ ಕಳವು ನಡೆದಿದ್ದು ಇದರ ಹಿಂದೆ ದೊಡ್ಡ ಜಾಲವಿರುವ ಬಗ್ಗೆ ಸಂಶಯವಿದೆ. ಆದರೆ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಅಮಾಯಕನ ಮೇಲೆ ದಂಡ ವಿಧಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.ಲೋಕೇಶ್ ಅವರಿಗೆ ಹಲ್ಲೆ ನಡೆಸಿದ  ಅರಣ್ಯ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡುವಂತೆ ಪ್ರತಿಭಟನಾಕಾರು ಆಗ್ರಹಿಸಿದ್ದಾರೆ.

ಇದಕ್ಕೆ ಒಂದು ವಾರದ ಗಡುವನ್ನು ಪ್ರತಿಭಟನಾಕಾರರು ನೀಡಿದರು. ಇಲ್ಲದೇ ಹೋದಲ್ಲಿ ಮುಂದಿನ ಸೋಮವಾರ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಮಾತ್ರವಲ್ಲದೆ ಈ ಮಧ್ಯೆ ನೀತಿ ತಂಡದಿಂದ ಬೆಂಗಳೂರು ಮಾನವ ಹಕ್ಕುಗಳ ಕಚೇರಿಗೂ ದೂರು ಕೂಡ ನೀಡಲಾಗಿದೆ.

ಜಿಲ್ಲಾ ಅರಣ್ಯ ಅಧಿಕಾರಿಗಳ ಆದೇಶದಂತೆ ಸ್ಥಳಕ್ಕೆ ಬಂದ ವಲಯ ಅರಣ್ಯ ಅಧಿಕಾರಿ ಶಿವಾನಂದ  ಅವರಿಗೆ ಮನವಿ ಸಲ್ಲಿಸಲಾಗಿದೆ. ಅರಣ್ಯ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಲಾಯಿತು.  ಪ್ರತಿಭಟನೆಯಲ್ಲಿ ಹೆಚ್ಚಿನ  ಗ್ರಾಮಸ್ಥರು, ತಂಡದ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

7 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

16 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

17 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago