Advertisement
ಸುದ್ದಿಗಳು

ಅರಣ್ಯ ಇಲಾಖಾ ಸಿಬಂದಿಗಳಿಂದ ಹಲ್ಲೆ ಆರೋಪ : ನಾಗರಿಕರಿಂದ ಪ್ರತಿಭಟನೆ

Share

ಸುಬ್ರಹ್ಮಣ್ಯ: ಕಡಬ ತಾಲೂಕು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೊಕೇಶ್ ಎಂಬವರ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ನೀತಿ ತಂಡದ ನೇತೃತ್ವದಲ್ಲಿ ಸುಬ್ರಹ್ಮಣ್ಯ ಸಮೀಪ ಕೆಂಜಳದ ಅರಣ್ಯ ಇಲಾಖೆಯ ಕಚೇರಿಯ ಮುಂದೆ  ಪ್ರತಿಭಟನೆ ನಡೆಯಿತು.

ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು, ಈ ಮರಗಳನ್ನು ಲೋಕೇಶ್ ಎಂಬವರು ಕಳವು ನಡೆಸಿದ್ದಾರೆಂದು ಆರೋಪಿಸಿ ಲೋಕೇಶ್ ಅವರನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿ, ಅವರಿಗೆ 25ಸಾವಿರ ದಂಡ ವಿಧಿಸಿದ್ದರು. ಈ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಹಲ್ಲೆ ಖಂಡಿಸಿ ಶನಿವಾರ  ಕೆಂಜಾಳದಲ್ಲಿ ನಾಗರಿಕರಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ  ಮಾತನಾಡಿದ ನೀತಿ ತಂಡದ ಅಧ್ಯಕ್ಷರು ಹಾಗೂ ಗ್ರಾಮಸ್ಥರು, ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ್ ಎಂಬವರು ನಿರಾಪರಾಧಿಯಾಗಿದ್ದು ಅವರ ಮೇಲೆ ವಿನಾಃ ಕಾರಣ ಹಲ್ಲೆ ನಡೆಸಲಾಗಿದೆ, ಭಾಗಿಮಲೆ ಮೀಸಲು ಅರಣ್ಯದಲ್ಲಿ ಬೃಹತ್ ಗಾತ್ರದ ಮರ ಕಳವು ನಡೆದಿದ್ದು ಇದರ ಹಿಂದೆ ದೊಡ್ಡ ಜಾಲವಿರುವ ಬಗ್ಗೆ ಸಂಶಯವಿದೆ. ಆದರೆ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಅಮಾಯಕನ ಮೇಲೆ ದಂಡ ವಿಧಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.ಲೋಕೇಶ್ ಅವರಿಗೆ ಹಲ್ಲೆ ನಡೆಸಿದ  ಅರಣ್ಯ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡುವಂತೆ ಪ್ರತಿಭಟನಾಕಾರು ಆಗ್ರಹಿಸಿದ್ದಾರೆ.

ಇದಕ್ಕೆ ಒಂದು ವಾರದ ಗಡುವನ್ನು ಪ್ರತಿಭಟನಾಕಾರರು ನೀಡಿದರು. ಇಲ್ಲದೇ ಹೋದಲ್ಲಿ ಮುಂದಿನ ಸೋಮವಾರ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಮಾತ್ರವಲ್ಲದೆ ಈ ಮಧ್ಯೆ ನೀತಿ ತಂಡದಿಂದ ಬೆಂಗಳೂರು ಮಾನವ ಹಕ್ಕುಗಳ ಕಚೇರಿಗೂ ದೂರು ಕೂಡ ನೀಡಲಾಗಿದೆ.

ಜಿಲ್ಲಾ ಅರಣ್ಯ ಅಧಿಕಾರಿಗಳ ಆದೇಶದಂತೆ ಸ್ಥಳಕ್ಕೆ ಬಂದ ವಲಯ ಅರಣ್ಯ ಅಧಿಕಾರಿ ಶಿವಾನಂದ  ಅವರಿಗೆ ಮನವಿ ಸಲ್ಲಿಸಲಾಗಿದೆ. ಅರಣ್ಯ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಲಾಯಿತು.  ಪ್ರತಿಭಟನೆಯಲ್ಲಿ ಹೆಚ್ಚಿನ  ಗ್ರಾಮಸ್ಥರು, ತಂಡದ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

4 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

6 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

10 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

11 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

20 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

20 hours ago