Advertisement
ಮಾಹಿತಿ

ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಕೇರಳದಲ್ಲಿ ಭಾರೀ ಮಳೆಯೊಂದಿಗೆ ಸುಳಿಗಾಳಿ ಸಾಧ್ಯತೆ

Share

ತಿರುವನಂತಪುರ: ತಡವಾಗಿ ಆಗಮಿಸಿದ ಮುಂಗಾರು ಮಳೆ ಏನಾಗುತ್ತದೆ ? ದುರ್ಬಲವಾಗುತ್ತಾ ? ವೇಗ ಪಡೆಯುತ್ತಾ ? ಈ ಪ್ರಶ್ನೆಗೆ ಕಾರಣ ಇದೆ. ಇದೀಗ  ಅರಬಿ ಸಮುದ್ರದಲ್ಲಿ ಭಾನುವಾರ ಬೆಳಿಗ್ಗಿನಿಂದಲೇ ವಾಯುಭಾರ ಕುಸಿತ ಉಂಟಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ತೀವ್ರ ತರಹದ ವಾಯುಭಾರ ಕುಸಿತ ಉಂಟಾಗಿ ಅದು ವಾಯು ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು  ಸುಳಿ ಗಾಳಿಯಾಗಿ ರೂಪುಗೊಳ್ಳಲಿದೆ ಎಂಬ ಸೂಚನೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗಾಳಿಗೆ ಹೆಸರು ನೀಡುವ ಸರದಿ ಈಗ ಭಾರತದ್ದಾಗಿದ್ದು ವಾಯು ಎಂಬ ಹೆಸರು ನೀಡಲಾಗಿದೆ. ಸೋಮವಾರ ರಾತ್ರಿ ವಾಯುಭಾರ ಕುಸಿತ ತೀವ್ರಗೊಳ್ಳಲಿದ್ದು ಅದುವರೆಗೆ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕ, ಗೋವಾ ತೀರಗಳಲ್ಲೂ ಮಳೆಯಾಗುವ ಸಂಭವ ಇದೆ. ಬುಧವಾರದ ವೇಳೆಗೆ ವಾಯುಭಾರ ಕುಸಿತ ಸುಳಿಗಾಳಿಯಾಗಿ ರೂಪಾಂತರಗೊಂಡು ದಕ್ಷಿಣ ಭಾರತದ ತೀರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಸುತ್ತದೆಯೇ ಹೊರತು ಗಾಳಿ ಬೀಸಿ ನಾಶ ಉಂಟು ಮಾಡುವುದಿಲ್ಲ ಎಂಬ ಸೂಚನೆ ನೀಡಿದೆ. ಇದೇ ಚಂಡಮಾರುತವಾಗಿ ಪರಿವರ್ತನೆ ಸಾಧ್ಯತೆಯೂ ಇದೆ.

ಈಗ ಭಾರೀ ಮಳೆಯಾಗುವ ಸಂಭವವಿದ್ದರೂ ಈ ಬೆಳವಣಿಗೆ ಮುಂಗಾರು ಮಳೆಯನ್ನು ದುರ್ಬಲಗೊಳಿಸುವ ಆತಂಕ ಇದೆ ಎಂಬುದು ಹವಾಮಾನ ತಜ್ಞರ ಅಭಿಪ್ರಾಯವಾಗಿದೆ. ಸುಳಿಗಾಳಿ ಗುಜರಾತ್ ತೀರದ ಮೂಲಕ ಪಾಕಿಸ್ಥಾನದ ಕರಾಚಿ ಭಾಗಕ್ಕೆ ಸಾಗುವ ಸಂಭವವಿದ್ದು ಅಲ್ಲೂ ಮಳೆಯಾಗಬಹುದು. ಅದು ಭಾರತದ ತೀರ ಪ್ರದೇಶದ ಮಳೆ ಕಡಿಮೆಯಾಗಲು ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತದೆ.

 

ಮಂಗಳೂರು ಪ್ರದೇಶದಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

18 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

21 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago