ಮಾಹಿತಿ

ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಕೇರಳದಲ್ಲಿ ಭಾರೀ ಮಳೆಯೊಂದಿಗೆ ಸುಳಿಗಾಳಿ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಿರುವನಂತಪುರ: ತಡವಾಗಿ ಆಗಮಿಸಿದ ಮುಂಗಾರು ಮಳೆ ಏನಾಗುತ್ತದೆ ? ದುರ್ಬಲವಾಗುತ್ತಾ ? ವೇಗ ಪಡೆಯುತ್ತಾ ? ಈ ಪ್ರಶ್ನೆಗೆ ಕಾರಣ ಇದೆ. ಇದೀಗ  ಅರಬಿ ಸಮುದ್ರದಲ್ಲಿ ಭಾನುವಾರ ಬೆಳಿಗ್ಗಿನಿಂದಲೇ ವಾಯುಭಾರ ಕುಸಿತ ಉಂಟಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ತೀವ್ರ ತರಹದ ವಾಯುಭಾರ ಕುಸಿತ ಉಂಟಾಗಿ ಅದು ವಾಯು ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು  ಸುಳಿ ಗಾಳಿಯಾಗಿ ರೂಪುಗೊಳ್ಳಲಿದೆ ಎಂಬ ಸೂಚನೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement
Advertisement

ಗಾಳಿಗೆ ಹೆಸರು ನೀಡುವ ಸರದಿ ಈಗ ಭಾರತದ್ದಾಗಿದ್ದು ವಾಯು ಎಂಬ ಹೆಸರು ನೀಡಲಾಗಿದೆ. ಸೋಮವಾರ ರಾತ್ರಿ ವಾಯುಭಾರ ಕುಸಿತ ತೀವ್ರಗೊಳ್ಳಲಿದ್ದು ಅದುವರೆಗೆ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕ, ಗೋವಾ ತೀರಗಳಲ್ಲೂ ಮಳೆಯಾಗುವ ಸಂಭವ ಇದೆ. ಬುಧವಾರದ ವೇಳೆಗೆ ವಾಯುಭಾರ ಕುಸಿತ ಸುಳಿಗಾಳಿಯಾಗಿ ರೂಪಾಂತರಗೊಂಡು ದಕ್ಷಿಣ ಭಾರತದ ತೀರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಸುತ್ತದೆಯೇ ಹೊರತು ಗಾಳಿ ಬೀಸಿ ನಾಶ ಉಂಟು ಮಾಡುವುದಿಲ್ಲ ಎಂಬ ಸೂಚನೆ ನೀಡಿದೆ. ಇದೇ ಚಂಡಮಾರುತವಾಗಿ ಪರಿವರ್ತನೆ ಸಾಧ್ಯತೆಯೂ ಇದೆ.

ಈಗ ಭಾರೀ ಮಳೆಯಾಗುವ ಸಂಭವವಿದ್ದರೂ ಈ ಬೆಳವಣಿಗೆ ಮುಂಗಾರು ಮಳೆಯನ್ನು ದುರ್ಬಲಗೊಳಿಸುವ ಆತಂಕ ಇದೆ ಎಂಬುದು ಹವಾಮಾನ ತಜ್ಞರ ಅಭಿಪ್ರಾಯವಾಗಿದೆ. ಸುಳಿಗಾಳಿ ಗುಜರಾತ್ ತೀರದ ಮೂಲಕ ಪಾಕಿಸ್ಥಾನದ ಕರಾಚಿ ಭಾಗಕ್ಕೆ ಸಾಗುವ ಸಂಭವವಿದ್ದು ಅಲ್ಲೂ ಮಳೆಯಾಗಬಹುದು. ಅದು ಭಾರತದ ತೀರ ಪ್ರದೇಶದ ಮಳೆ ಕಡಿಮೆಯಾಗಲು ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತದೆ.

 

ಮಂಗಳೂರು ಪ್ರದೇಶದಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

21 minutes ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

10 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

21 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

1 day ago