ತಿರುವನಂತಪುರ: ತಡವಾಗಿ ಆಗಮಿಸಿದ ಮುಂಗಾರು ಮಳೆ ಏನಾಗುತ್ತದೆ ? ದುರ್ಬಲವಾಗುತ್ತಾ ? ವೇಗ ಪಡೆಯುತ್ತಾ ? ಈ ಪ್ರಶ್ನೆಗೆ ಕಾರಣ ಇದೆ. ಇದೀಗ ಅರಬಿ ಸಮುದ್ರದಲ್ಲಿ ಭಾನುವಾರ ಬೆಳಿಗ್ಗಿನಿಂದಲೇ ವಾಯುಭಾರ ಕುಸಿತ ಉಂಟಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ತೀವ್ರ ತರಹದ ವಾಯುಭಾರ ಕುಸಿತ ಉಂಟಾಗಿ ಅದು ವಾಯು ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು ಸುಳಿ ಗಾಳಿಯಾಗಿ ರೂಪುಗೊಳ್ಳಲಿದೆ ಎಂಬ ಸೂಚನೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗಾಳಿಗೆ ಹೆಸರು ನೀಡುವ ಸರದಿ ಈಗ ಭಾರತದ್ದಾಗಿದ್ದು ವಾಯು ಎಂಬ ಹೆಸರು ನೀಡಲಾಗಿದೆ. ಸೋಮವಾರ ರಾತ್ರಿ ವಾಯುಭಾರ ಕುಸಿತ ತೀವ್ರಗೊಳ್ಳಲಿದ್ದು ಅದುವರೆಗೆ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕ, ಗೋವಾ ತೀರಗಳಲ್ಲೂ ಮಳೆಯಾಗುವ ಸಂಭವ ಇದೆ. ಬುಧವಾರದ ವೇಳೆಗೆ ವಾಯುಭಾರ ಕುಸಿತ ಸುಳಿಗಾಳಿಯಾಗಿ ರೂಪಾಂತರಗೊಂಡು ದಕ್ಷಿಣ ಭಾರತದ ತೀರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಸುತ್ತದೆಯೇ ಹೊರತು ಗಾಳಿ ಬೀಸಿ ನಾಶ ಉಂಟು ಮಾಡುವುದಿಲ್ಲ ಎಂಬ ಸೂಚನೆ ನೀಡಿದೆ. ಇದೇ ಚಂಡಮಾರುತವಾಗಿ ಪರಿವರ್ತನೆ ಸಾಧ್ಯತೆಯೂ ಇದೆ.
ಈಗ ಭಾರೀ ಮಳೆಯಾಗುವ ಸಂಭವವಿದ್ದರೂ ಈ ಬೆಳವಣಿಗೆ ಮುಂಗಾರು ಮಳೆಯನ್ನು ದುರ್ಬಲಗೊಳಿಸುವ ಆತಂಕ ಇದೆ ಎಂಬುದು ಹವಾಮಾನ ತಜ್ಞರ ಅಭಿಪ್ರಾಯವಾಗಿದೆ. ಸುಳಿಗಾಳಿ ಗುಜರಾತ್ ತೀರದ ಮೂಲಕ ಪಾಕಿಸ್ಥಾನದ ಕರಾಚಿ ಭಾಗಕ್ಕೆ ಸಾಗುವ ಸಂಭವವಿದ್ದು ಅಲ್ಲೂ ಮಳೆಯಾಗಬಹುದು. ಅದು ಭಾರತದ ತೀರ ಪ್ರದೇಶದ ಮಳೆ ಕಡಿಮೆಯಾಗಲು ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತದೆ.
ಮಂಗಳೂರು ಪ್ರದೇಶದಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…