ತಿರುವನಂತಪುರ: ತಡವಾಗಿ ಆಗಮಿಸಿದ ಮುಂಗಾರು ಮಳೆ ಏನಾಗುತ್ತದೆ ? ದುರ್ಬಲವಾಗುತ್ತಾ ? ವೇಗ ಪಡೆಯುತ್ತಾ ? ಈ ಪ್ರಶ್ನೆಗೆ ಕಾರಣ ಇದೆ. ಇದೀಗ ಅರಬಿ ಸಮುದ್ರದಲ್ಲಿ ಭಾನುವಾರ ಬೆಳಿಗ್ಗಿನಿಂದಲೇ ವಾಯುಭಾರ ಕುಸಿತ ಉಂಟಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ತೀವ್ರ ತರಹದ ವಾಯುಭಾರ ಕುಸಿತ ಉಂಟಾಗಿ ಅದು ವಾಯು ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು ಸುಳಿ ಗಾಳಿಯಾಗಿ ರೂಪುಗೊಳ್ಳಲಿದೆ ಎಂಬ ಸೂಚನೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗಾಳಿಗೆ ಹೆಸರು ನೀಡುವ ಸರದಿ ಈಗ ಭಾರತದ್ದಾಗಿದ್ದು ವಾಯು ಎಂಬ ಹೆಸರು ನೀಡಲಾಗಿದೆ. ಸೋಮವಾರ ರಾತ್ರಿ ವಾಯುಭಾರ ಕುಸಿತ ತೀವ್ರಗೊಳ್ಳಲಿದ್ದು ಅದುವರೆಗೆ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕ, ಗೋವಾ ತೀರಗಳಲ್ಲೂ ಮಳೆಯಾಗುವ ಸಂಭವ ಇದೆ. ಬುಧವಾರದ ವೇಳೆಗೆ ವಾಯುಭಾರ ಕುಸಿತ ಸುಳಿಗಾಳಿಯಾಗಿ ರೂಪಾಂತರಗೊಂಡು ದಕ್ಷಿಣ ಭಾರತದ ತೀರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಸುತ್ತದೆಯೇ ಹೊರತು ಗಾಳಿ ಬೀಸಿ ನಾಶ ಉಂಟು ಮಾಡುವುದಿಲ್ಲ ಎಂಬ ಸೂಚನೆ ನೀಡಿದೆ. ಇದೇ ಚಂಡಮಾರುತವಾಗಿ ಪರಿವರ್ತನೆ ಸಾಧ್ಯತೆಯೂ ಇದೆ.
ಈಗ ಭಾರೀ ಮಳೆಯಾಗುವ ಸಂಭವವಿದ್ದರೂ ಈ ಬೆಳವಣಿಗೆ ಮುಂಗಾರು ಮಳೆಯನ್ನು ದುರ್ಬಲಗೊಳಿಸುವ ಆತಂಕ ಇದೆ ಎಂಬುದು ಹವಾಮಾನ ತಜ್ಞರ ಅಭಿಪ್ರಾಯವಾಗಿದೆ. ಸುಳಿಗಾಳಿ ಗುಜರಾತ್ ತೀರದ ಮೂಲಕ ಪಾಕಿಸ್ಥಾನದ ಕರಾಚಿ ಭಾಗಕ್ಕೆ ಸಾಗುವ ಸಂಭವವಿದ್ದು ಅಲ್ಲೂ ಮಳೆಯಾಗಬಹುದು. ಅದು ಭಾರತದ ತೀರ ಪ್ರದೇಶದ ಮಳೆ ಕಡಿಮೆಯಾಗಲು ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತದೆ.
ಮಂಗಳೂರು ಪ್ರದೇಶದಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.