Advertisement
ಮಾಹಿತಿ

ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಕೇರಳದಲ್ಲಿ ಭಾರೀ ಮಳೆಯೊಂದಿಗೆ ಸುಳಿಗಾಳಿ ಸಾಧ್ಯತೆ

Share

ತಿರುವನಂತಪುರ: ತಡವಾಗಿ ಆಗಮಿಸಿದ ಮುಂಗಾರು ಮಳೆ ಏನಾಗುತ್ತದೆ ? ದುರ್ಬಲವಾಗುತ್ತಾ ? ವೇಗ ಪಡೆಯುತ್ತಾ ? ಈ ಪ್ರಶ್ನೆಗೆ ಕಾರಣ ಇದೆ. ಇದೀಗ  ಅರಬಿ ಸಮುದ್ರದಲ್ಲಿ ಭಾನುವಾರ ಬೆಳಿಗ್ಗಿನಿಂದಲೇ ವಾಯುಭಾರ ಕುಸಿತ ಉಂಟಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ತೀವ್ರ ತರಹದ ವಾಯುಭಾರ ಕುಸಿತ ಉಂಟಾಗಿ ಅದು ವಾಯು ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು  ಸುಳಿ ಗಾಳಿಯಾಗಿ ರೂಪುಗೊಳ್ಳಲಿದೆ ಎಂಬ ಸೂಚನೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗಾಳಿಗೆ ಹೆಸರು ನೀಡುವ ಸರದಿ ಈಗ ಭಾರತದ್ದಾಗಿದ್ದು ವಾಯು ಎಂಬ ಹೆಸರು ನೀಡಲಾಗಿದೆ. ಸೋಮವಾರ ರಾತ್ರಿ ವಾಯುಭಾರ ಕುಸಿತ ತೀವ್ರಗೊಳ್ಳಲಿದ್ದು ಅದುವರೆಗೆ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕ, ಗೋವಾ ತೀರಗಳಲ್ಲೂ ಮಳೆಯಾಗುವ ಸಂಭವ ಇದೆ. ಬುಧವಾರದ ವೇಳೆಗೆ ವಾಯುಭಾರ ಕುಸಿತ ಸುಳಿಗಾಳಿಯಾಗಿ ರೂಪಾಂತರಗೊಂಡು ದಕ್ಷಿಣ ಭಾರತದ ತೀರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಸುತ್ತದೆಯೇ ಹೊರತು ಗಾಳಿ ಬೀಸಿ ನಾಶ ಉಂಟು ಮಾಡುವುದಿಲ್ಲ ಎಂಬ ಸೂಚನೆ ನೀಡಿದೆ. ಇದೇ ಚಂಡಮಾರುತವಾಗಿ ಪರಿವರ್ತನೆ ಸಾಧ್ಯತೆಯೂ ಇದೆ.

ಈಗ ಭಾರೀ ಮಳೆಯಾಗುವ ಸಂಭವವಿದ್ದರೂ ಈ ಬೆಳವಣಿಗೆ ಮುಂಗಾರು ಮಳೆಯನ್ನು ದುರ್ಬಲಗೊಳಿಸುವ ಆತಂಕ ಇದೆ ಎಂಬುದು ಹವಾಮಾನ ತಜ್ಞರ ಅಭಿಪ್ರಾಯವಾಗಿದೆ. ಸುಳಿಗಾಳಿ ಗುಜರಾತ್ ತೀರದ ಮೂಲಕ ಪಾಕಿಸ್ಥಾನದ ಕರಾಚಿ ಭಾಗಕ್ಕೆ ಸಾಗುವ ಸಂಭವವಿದ್ದು ಅಲ್ಲೂ ಮಳೆಯಾಗಬಹುದು. ಅದು ಭಾರತದ ತೀರ ಪ್ರದೇಶದ ಮಳೆ ಕಡಿಮೆಯಾಗಲು ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತದೆ.

 

ಮಂಗಳೂರು ಪ್ರದೇಶದಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

4 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

5 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

17 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

18 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

18 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

24 hours ago