ತಿರುವನಂತಪುರ: ತಡವಾಗಿ ಆಗಮಿಸಿದ ಮುಂಗಾರು ಮಳೆ ಏನಾಗುತ್ತದೆ ? ದುರ್ಬಲವಾಗುತ್ತಾ ? ವೇಗ ಪಡೆಯುತ್ತಾ ? ಈ ಪ್ರಶ್ನೆಗೆ ಕಾರಣ ಇದೆ. ಇದೀಗ ಅರಬಿ ಸಮುದ್ರದಲ್ಲಿ ಭಾನುವಾರ ಬೆಳಿಗ್ಗಿನಿಂದಲೇ ವಾಯುಭಾರ ಕುಸಿತ ಉಂಟಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ತೀವ್ರ ತರಹದ ವಾಯುಭಾರ ಕುಸಿತ ಉಂಟಾಗಿ ಅದು ವಾಯು ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು ಸುಳಿ ಗಾಳಿಯಾಗಿ ರೂಪುಗೊಳ್ಳಲಿದೆ ಎಂಬ ಸೂಚನೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗಾಳಿಗೆ ಹೆಸರು ನೀಡುವ ಸರದಿ ಈಗ ಭಾರತದ್ದಾಗಿದ್ದು ವಾಯು ಎಂಬ ಹೆಸರು ನೀಡಲಾಗಿದೆ. ಸೋಮವಾರ ರಾತ್ರಿ ವಾಯುಭಾರ ಕುಸಿತ ತೀವ್ರಗೊಳ್ಳಲಿದ್ದು ಅದುವರೆಗೆ ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕ, ಗೋವಾ ತೀರಗಳಲ್ಲೂ ಮಳೆಯಾಗುವ ಸಂಭವ ಇದೆ. ಬುಧವಾರದ ವೇಳೆಗೆ ವಾಯುಭಾರ ಕುಸಿತ ಸುಳಿಗಾಳಿಯಾಗಿ ರೂಪಾಂತರಗೊಂಡು ದಕ್ಷಿಣ ಭಾರತದ ತೀರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಸುತ್ತದೆಯೇ ಹೊರತು ಗಾಳಿ ಬೀಸಿ ನಾಶ ಉಂಟು ಮಾಡುವುದಿಲ್ಲ ಎಂಬ ಸೂಚನೆ ನೀಡಿದೆ. ಇದೇ ಚಂಡಮಾರುತವಾಗಿ ಪರಿವರ್ತನೆ ಸಾಧ್ಯತೆಯೂ ಇದೆ.
ಈಗ ಭಾರೀ ಮಳೆಯಾಗುವ ಸಂಭವವಿದ್ದರೂ ಈ ಬೆಳವಣಿಗೆ ಮುಂಗಾರು ಮಳೆಯನ್ನು ದುರ್ಬಲಗೊಳಿಸುವ ಆತಂಕ ಇದೆ ಎಂಬುದು ಹವಾಮಾನ ತಜ್ಞರ ಅಭಿಪ್ರಾಯವಾಗಿದೆ. ಸುಳಿಗಾಳಿ ಗುಜರಾತ್ ತೀರದ ಮೂಲಕ ಪಾಕಿಸ್ಥಾನದ ಕರಾಚಿ ಭಾಗಕ್ಕೆ ಸಾಗುವ ಸಂಭವವಿದ್ದು ಅಲ್ಲೂ ಮಳೆಯಾಗಬಹುದು. ಅದು ಭಾರತದ ತೀರ ಪ್ರದೇಶದ ಮಳೆ ಕಡಿಮೆಯಾಗಲು ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತದೆ.
ಮಂಗಳೂರು ಪ್ರದೇಶದಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…