ಅರೆಕಲ್ಲಿನಲ್ಲಿ ಗ್ರಾಮೀಣ ಕ್ರೀಡಾಕೂಟ

August 26, 2019
2:12 PM

ಸಂಪಾಜೆ: ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ತಾಲೂಕು ಯುವ ಒಕ್ಕೂಟ ಮಡಿಕೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಮತ್ತು ವನಶ್ರೀ ಯುವಕ ಮಂಡಲಅರೇಕಲ್ಲು ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಕ್ರೀಡಾಕೂಟ ಮತ್ತು 19 ನೆ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಅರೆಕಲ್ಲಿನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮೊಸರು ಕುಡಿಕೆ ಮತ್ತು ರಿಂಗ್ ಎಸೆತ ಹಾಗೂ ಪುರುಷರಿಗೆ ಹಗ್ಗಜಗ್ಗಾಟ ಏರ್ಪಡಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವನಶ್ರೀ ಯುವಕ ಮಂಡಲದ ಅಧ್ಯಕ್ಷ ರಂಜಿತ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಕುಮಾರ್ ಚೆದ್ಕಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕಾರ್ಯಕರ್ತೆ ಪುಷ್ಪಾವತಿ, ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ, ಶ್ರೀ ಚರಣ್ ಬಿ.ಜೆ ಮತ್ತು ಉಪಸ್ಥಿತರಿದ್ದರು.

ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಅರೇಂಜ್ ಫ್ರೆಂಡ್ಸ್ ಮರ್ಕಂಜ, ಧ್ವಿತೀಯ ಸ್ಥಾನವನ್ನು ಪತಂಜಲಿ ಮಿತ್ರ ಬಳಗ ಸಂಪಾಜೆ ಪಡೆಯಿತು. ಕಾರ್ಯಕ್ರಮದಲ್ಲಿ ತಿಲಕ್ ಕುಲಾಲ್ ಸ್ಚಾಗತಿಸಿ, ಲಕ್ಷ್ಮಣ ಆಚಾರ್ಯ ವಂದಿಸಿದರು‌. ಉದಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror