Advertisement
ಮನರಂಜನೆ

ಅರೆಭಾಷೆಯಲ್ಲೊಂದು ವಿನೂತನ ರಂಗಪ್ರಯೋಗ : ಮನ ಸೆಳೆದ ‘ಎಮ್ಮ ಮನೆಯಂಗಳದಿ’

Share
ಸುಳ್ಯ: ಸಮೃದ್ಧ ಭಾಷೆಯಾದ ಅರೆಭಾಷೆಯಲ್ಲಿ ಸೃಷ್ಠಿಯಾಗುವ ನಾಟಕಗಳು ತನ್ನ ಆಕರ್ಷಕ ಅಭಿನಯ, ಮನೋಜ್ಞ ಭಾಷಾ ಪ್ರಯೋಗದ ಮೂಲಕ ಗಮನ ಸೆಳೆಯುತ್ತವೆ.
ರಂಗಭೂಮಿಯಲ್ಲಿ ಅರೆಭಾಷಾ ಪ್ರಯೋಗಗಳು ವಿರಳವಾದರೂ ಬಂದಿರುವ ನಾಟಕಗಳು ಬದುಕಿಗೆ ಆಪ್ತವಾಗಿ ಜನ ಮನ ಗೆಲ್ಲುತ್ತದೆ. ಇದಕ್ಕೆ ಒಂದು ಸೇರ್ಪಡೆ ರಂಗಭೂಮಿಯ ಭರವಸೆಯ ಕಲಾವಿದ ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ ಲೊಕೇಶ್ ಊರುಬೈಲು ನಿರ್ದೇಶನದ ‘ಎಮ್ಮ ಮನೆಯಂಗಳದಿ’ ಅರೆಭಾಷೆ, ಸಂಸ್ಕೃತಿ ಪ್ರತಿಬಿಂಬಿಸುವ ನಾಟಕ
ಗ್ರಾಮೀಣ ಜನಪದ ಕಥಾಹಂದರದಲ್ಲಿ ರಚಿತವಾದ ರಂಗ ಪ್ರಯೋಗ.  ಬೇಸಾಯ, ಬಿಸುಕಾಣಿಕೆ, ಬೇಟೆ, ಮಾಗಣೆ ಪಟೇಲರು ಮತ್ತು ಸಾಮಾನ್ಯ ರೈತರ ಬಾಂಧವ್ಯ ಜೊತೆಗೆ ಜಾತಿ,ಧರ್ಮ,  ಆಸ್ತಿ ,ಅಂತಸ್ತು ಮೀರಿದ ಪ್ರೇಮ, ಹಿರಿಯರ ಸಮ್ಮುಖದ ವಿವಾಹ , ಮದುವೆಯ  ಸಂಭ್ರಮದ ಜೊತೆಗೆ  ಅರೆಭಾಷಿಕ ಸಂಪ್ರದಾಯದ ಸೋಬಾನೆ ಹಾಡಿನ  ನವೀರಾದ ಸಂಗೀತದ ಜೊತೆಗೆ ಕಚಗುಳಿಯಿಡುವ ಸಂಭಾಷಣೆಗಳಿಗೆ ಅದ್ಭುತವಾಗಿ ರಂಗದ ಮೇಲೆ ಜೀವ ತುಂಬುವ ಕಲಾವಿದರು. ಸುಮಾರು ಒಂದು ಗಂಟೆಗಳ ಕಾಲ ಪ್ರೇಕ್ಷಕರನ್ನು ಹಿಡಿದಿಟ್ಟು ರಂಜಿಸುವ ,”ಎಮ್ಮ ಮನೆಯಂಗಳದಿ”ನಾಟಕಕ್ಕೆ ಸಾಕ್ಷಿಯಾಗಿದ್ದು ಪಂಜದ ಶ್ರೀ ಪಂಚಲಿಂಗೇಶ್ವರ ಸಭಾಂಗಣ.
ರಂಗದಲ್ಲಿ ಭವಾನಿ ಶಂಕರ್ ಅಡ್ತಲೆ, ಶಿವಪ್ರಸಾದ್ ಆಲೆಟ್ಟಿ, ದೇವಿಪ್ರಸಾದ್ ಕಾಯರ್ತೋಡಿ, ಪುಷ್ಪರಾಜ್ ಗೋಳಿತೊಟ್ಟು,ಸಂಪ್ರೀತಾ ರೈ ಕಾಯರ್ತೋಡಿ,ಶಶಿಕಾಂತ್ ಮಿತ್ತೂರು, ಶ್ವೇತಾ ಕೇರ್ಪಳ, ರಕ್ಷಿತ್ ಉಬರಡ್ಕ,  ಗಾನ, ಅಶ್ವಿನಿ ಪೇರಾಲು, ಮೋಕ್ಷಿತ್ ಕನಕಮಜಲು,  ಜವಾಹರ್ ಕೊಯಿಂಗಾಜೆ,ಜೈದಿಪ್, ಕೇಶವ ಪ್ರಸನ್ನ ಮನೋಜ್ಞ ಅಭಿನಯ ಪ್ರದರ್ಶಿಸಿದರು. ನೇಪಥ್ಯದಲ್ಲಿ ಶುಭದಾ .ಆರ್. ಪ್ರಕಾಶ್, ಮೇಘಕೃಷ್ಣ ಕಾಯರ್ತೋಡಿ, ಲೋಹಿತಾಶ್ವ ಪರಮಂಡಲ, ಕಮಲಾಕ್ಷ ಆಚಾರ್ಯ, ವಿಜಯಕುಮಾರ್ ಮಯೂರಿ
ಸಹಕರಿಸಿದರು.
ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮತ್ತು ಜೇಸಿಐ ಪಂಜ ಕಾರ್ಯಕ್ರಮ ಪ್ರಾಯೋಜಿಸಿದ್ದರು. ಲೋಕೇಶ್ ಊರುಬೈಲು ನಿರ್ದೇಶನದ ಅರೆಭಾಷೆ ನಾಟಕ ‘ಮಾಯಕ’ ವು ಹತ್ತಾರು ಪ್ರದರ್ಶನ ಕಂಡು ಜನ ಮನ ಗೆದ್ದಿತ್ತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

28 minutes ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

5 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

5 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

5 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

17 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago