Advertisement
ಮನರಂಜನೆ

ಅರೆಭಾಷೆಯಲ್ಲೊಂದು ವಿನೂತನ ರಂಗಪ್ರಯೋಗ : ಮನ ಸೆಳೆದ ‘ಎಮ್ಮ ಮನೆಯಂಗಳದಿ’

Share
ಸುಳ್ಯ: ಸಮೃದ್ಧ ಭಾಷೆಯಾದ ಅರೆಭಾಷೆಯಲ್ಲಿ ಸೃಷ್ಠಿಯಾಗುವ ನಾಟಕಗಳು ತನ್ನ ಆಕರ್ಷಕ ಅಭಿನಯ, ಮನೋಜ್ಞ ಭಾಷಾ ಪ್ರಯೋಗದ ಮೂಲಕ ಗಮನ ಸೆಳೆಯುತ್ತವೆ.
ರಂಗಭೂಮಿಯಲ್ಲಿ ಅರೆಭಾಷಾ ಪ್ರಯೋಗಗಳು ವಿರಳವಾದರೂ ಬಂದಿರುವ ನಾಟಕಗಳು ಬದುಕಿಗೆ ಆಪ್ತವಾಗಿ ಜನ ಮನ ಗೆಲ್ಲುತ್ತದೆ. ಇದಕ್ಕೆ ಒಂದು ಸೇರ್ಪಡೆ ರಂಗಭೂಮಿಯ ಭರವಸೆಯ ಕಲಾವಿದ ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ ಲೊಕೇಶ್ ಊರುಬೈಲು ನಿರ್ದೇಶನದ ‘ಎಮ್ಮ ಮನೆಯಂಗಳದಿ’ ಅರೆಭಾಷೆ, ಸಂಸ್ಕೃತಿ ಪ್ರತಿಬಿಂಬಿಸುವ ನಾಟಕ
ಗ್ರಾಮೀಣ ಜನಪದ ಕಥಾಹಂದರದಲ್ಲಿ ರಚಿತವಾದ ರಂಗ ಪ್ರಯೋಗ.  ಬೇಸಾಯ, ಬಿಸುಕಾಣಿಕೆ, ಬೇಟೆ, ಮಾಗಣೆ ಪಟೇಲರು ಮತ್ತು ಸಾಮಾನ್ಯ ರೈತರ ಬಾಂಧವ್ಯ ಜೊತೆಗೆ ಜಾತಿ,ಧರ್ಮ,  ಆಸ್ತಿ ,ಅಂತಸ್ತು ಮೀರಿದ ಪ್ರೇಮ, ಹಿರಿಯರ ಸಮ್ಮುಖದ ವಿವಾಹ , ಮದುವೆಯ  ಸಂಭ್ರಮದ ಜೊತೆಗೆ  ಅರೆಭಾಷಿಕ ಸಂಪ್ರದಾಯದ ಸೋಬಾನೆ ಹಾಡಿನ  ನವೀರಾದ ಸಂಗೀತದ ಜೊತೆಗೆ ಕಚಗುಳಿಯಿಡುವ ಸಂಭಾಷಣೆಗಳಿಗೆ ಅದ್ಭುತವಾಗಿ ರಂಗದ ಮೇಲೆ ಜೀವ ತುಂಬುವ ಕಲಾವಿದರು. ಸುಮಾರು ಒಂದು ಗಂಟೆಗಳ ಕಾಲ ಪ್ರೇಕ್ಷಕರನ್ನು ಹಿಡಿದಿಟ್ಟು ರಂಜಿಸುವ ,”ಎಮ್ಮ ಮನೆಯಂಗಳದಿ”ನಾಟಕಕ್ಕೆ ಸಾಕ್ಷಿಯಾಗಿದ್ದು ಪಂಜದ ಶ್ರೀ ಪಂಚಲಿಂಗೇಶ್ವರ ಸಭಾಂಗಣ.
ರಂಗದಲ್ಲಿ ಭವಾನಿ ಶಂಕರ್ ಅಡ್ತಲೆ, ಶಿವಪ್ರಸಾದ್ ಆಲೆಟ್ಟಿ, ದೇವಿಪ್ರಸಾದ್ ಕಾಯರ್ತೋಡಿ, ಪುಷ್ಪರಾಜ್ ಗೋಳಿತೊಟ್ಟು,ಸಂಪ್ರೀತಾ ರೈ ಕಾಯರ್ತೋಡಿ,ಶಶಿಕಾಂತ್ ಮಿತ್ತೂರು, ಶ್ವೇತಾ ಕೇರ್ಪಳ, ರಕ್ಷಿತ್ ಉಬರಡ್ಕ,  ಗಾನ, ಅಶ್ವಿನಿ ಪೇರಾಲು, ಮೋಕ್ಷಿತ್ ಕನಕಮಜಲು,  ಜವಾಹರ್ ಕೊಯಿಂಗಾಜೆ,ಜೈದಿಪ್, ಕೇಶವ ಪ್ರಸನ್ನ ಮನೋಜ್ಞ ಅಭಿನಯ ಪ್ರದರ್ಶಿಸಿದರು. ನೇಪಥ್ಯದಲ್ಲಿ ಶುಭದಾ .ಆರ್. ಪ್ರಕಾಶ್, ಮೇಘಕೃಷ್ಣ ಕಾಯರ್ತೋಡಿ, ಲೋಹಿತಾಶ್ವ ಪರಮಂಡಲ, ಕಮಲಾಕ್ಷ ಆಚಾರ್ಯ, ವಿಜಯಕುಮಾರ್ ಮಯೂರಿ
ಸಹಕರಿಸಿದರು.
ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮತ್ತು ಜೇಸಿಐ ಪಂಜ ಕಾರ್ಯಕ್ರಮ ಪ್ರಾಯೋಜಿಸಿದ್ದರು. ಲೋಕೇಶ್ ಊರುಬೈಲು ನಿರ್ದೇಶನದ ಅರೆಭಾಷೆ ನಾಟಕ ‘ಮಾಯಕ’ ವು ಹತ್ತಾರು ಪ್ರದರ್ಶನ ಕಂಡು ಜನ ಮನ ಗೆದ್ದಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

7 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago