Advertisement
ಮನರಂಜನೆ

ಅರೆಭಾಷೆಯಲ್ಲೊಂದು ವಿನೂತನ ರಂಗಪ್ರಯೋಗ : ಮನ ಸೆಳೆದ ‘ಎಮ್ಮ ಮನೆಯಂಗಳದಿ’

Share
ಸುಳ್ಯ: ಸಮೃದ್ಧ ಭಾಷೆಯಾದ ಅರೆಭಾಷೆಯಲ್ಲಿ ಸೃಷ್ಠಿಯಾಗುವ ನಾಟಕಗಳು ತನ್ನ ಆಕರ್ಷಕ ಅಭಿನಯ, ಮನೋಜ್ಞ ಭಾಷಾ ಪ್ರಯೋಗದ ಮೂಲಕ ಗಮನ ಸೆಳೆಯುತ್ತವೆ.
ರಂಗಭೂಮಿಯಲ್ಲಿ ಅರೆಭಾಷಾ ಪ್ರಯೋಗಗಳು ವಿರಳವಾದರೂ ಬಂದಿರುವ ನಾಟಕಗಳು ಬದುಕಿಗೆ ಆಪ್ತವಾಗಿ ಜನ ಮನ ಗೆಲ್ಲುತ್ತದೆ. ಇದಕ್ಕೆ ಒಂದು ಸೇರ್ಪಡೆ ರಂಗಭೂಮಿಯ ಭರವಸೆಯ ಕಲಾವಿದ ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ ಲೊಕೇಶ್ ಊರುಬೈಲು ನಿರ್ದೇಶನದ ‘ಎಮ್ಮ ಮನೆಯಂಗಳದಿ’ ಅರೆಭಾಷೆ, ಸಂಸ್ಕೃತಿ ಪ್ರತಿಬಿಂಬಿಸುವ ನಾಟಕ
ಗ್ರಾಮೀಣ ಜನಪದ ಕಥಾಹಂದರದಲ್ಲಿ ರಚಿತವಾದ ರಂಗ ಪ್ರಯೋಗ.  ಬೇಸಾಯ, ಬಿಸುಕಾಣಿಕೆ, ಬೇಟೆ, ಮಾಗಣೆ ಪಟೇಲರು ಮತ್ತು ಸಾಮಾನ್ಯ ರೈತರ ಬಾಂಧವ್ಯ ಜೊತೆಗೆ ಜಾತಿ,ಧರ್ಮ,  ಆಸ್ತಿ ,ಅಂತಸ್ತು ಮೀರಿದ ಪ್ರೇಮ, ಹಿರಿಯರ ಸಮ್ಮುಖದ ವಿವಾಹ , ಮದುವೆಯ  ಸಂಭ್ರಮದ ಜೊತೆಗೆ  ಅರೆಭಾಷಿಕ ಸಂಪ್ರದಾಯದ ಸೋಬಾನೆ ಹಾಡಿನ  ನವೀರಾದ ಸಂಗೀತದ ಜೊತೆಗೆ ಕಚಗುಳಿಯಿಡುವ ಸಂಭಾಷಣೆಗಳಿಗೆ ಅದ್ಭುತವಾಗಿ ರಂಗದ ಮೇಲೆ ಜೀವ ತುಂಬುವ ಕಲಾವಿದರು. ಸುಮಾರು ಒಂದು ಗಂಟೆಗಳ ಕಾಲ ಪ್ರೇಕ್ಷಕರನ್ನು ಹಿಡಿದಿಟ್ಟು ರಂಜಿಸುವ ,”ಎಮ್ಮ ಮನೆಯಂಗಳದಿ”ನಾಟಕಕ್ಕೆ ಸಾಕ್ಷಿಯಾಗಿದ್ದು ಪಂಜದ ಶ್ರೀ ಪಂಚಲಿಂಗೇಶ್ವರ ಸಭಾಂಗಣ.
ರಂಗದಲ್ಲಿ ಭವಾನಿ ಶಂಕರ್ ಅಡ್ತಲೆ, ಶಿವಪ್ರಸಾದ್ ಆಲೆಟ್ಟಿ, ದೇವಿಪ್ರಸಾದ್ ಕಾಯರ್ತೋಡಿ, ಪುಷ್ಪರಾಜ್ ಗೋಳಿತೊಟ್ಟು,ಸಂಪ್ರೀತಾ ರೈ ಕಾಯರ್ತೋಡಿ,ಶಶಿಕಾಂತ್ ಮಿತ್ತೂರು, ಶ್ವೇತಾ ಕೇರ್ಪಳ, ರಕ್ಷಿತ್ ಉಬರಡ್ಕ,  ಗಾನ, ಅಶ್ವಿನಿ ಪೇರಾಲು, ಮೋಕ್ಷಿತ್ ಕನಕಮಜಲು,  ಜವಾಹರ್ ಕೊಯಿಂಗಾಜೆ,ಜೈದಿಪ್, ಕೇಶವ ಪ್ರಸನ್ನ ಮನೋಜ್ಞ ಅಭಿನಯ ಪ್ರದರ್ಶಿಸಿದರು. ನೇಪಥ್ಯದಲ್ಲಿ ಶುಭದಾ .ಆರ್. ಪ್ರಕಾಶ್, ಮೇಘಕೃಷ್ಣ ಕಾಯರ್ತೋಡಿ, ಲೋಹಿತಾಶ್ವ ಪರಮಂಡಲ, ಕಮಲಾಕ್ಷ ಆಚಾರ್ಯ, ವಿಜಯಕುಮಾರ್ ಮಯೂರಿ
ಸಹಕರಿಸಿದರು.
ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮತ್ತು ಜೇಸಿಐ ಪಂಜ ಕಾರ್ಯಕ್ರಮ ಪ್ರಾಯೋಜಿಸಿದ್ದರು. ಲೋಕೇಶ್ ಊರುಬೈಲು ನಿರ್ದೇಶನದ ಅರೆಭಾಷೆ ನಾಟಕ ‘ಮಾಯಕ’ ವು ಹತ್ತಾರು ಪ್ರದರ್ಶನ ಕಂಡು ಜನ ಮನ ಗೆದ್ದಿತ್ತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

8 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

15 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

23 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago