Advertisement
ಸುದ್ದಿಗಳು

ಅರೆಭಾಷೆ ಅಕಾಡೆಮಿ ನೇಮಕಾತಿಗೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

Share

ಸುಳ್ಯ: ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯ ಪಟ್ಟಿ ಹೊರ ಬೀಳುತ್ತಿದ್ದಂತೆ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ.

Advertisement
Advertisement
Advertisement
Advertisement

ಪಕ್ಷದ ಗಮನಕ್ಕೆ ಬಾರದೇ ನೇಮಕಾತಿ ನಡೆದಿದೆ ಎಂಬುದು ಪಕ್ಷದ ಮುಖಂಡರ ಆಕ್ಷೇಪ. ಅರೆ ಭಾಷಿಕರಾದ ಗೌಡ ಸಮುದಾಯದ ಹಲವು ಮಂದಿ ನಾಯಕರು ಬಿಜೆಪಿಯಲ್ಲಿದ್ದಾರೆ‌. ಅವರಲ್ಲಿ ಕೆಲವರಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷತೆ, ಸದಸ್ಯತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷದ ಸಕ್ರೀಯ ನಾಯಕರನ್ನು, ಸದಸ್ಯರನ್ನು ನೇಮಕಾತಿ ಸಂದರ್ಭ ಕಡೆಗಣಿಸಲಾಗಿದೆ ಎಂಬ ಆರೋಪ, ಆಕ್ರೋಶ ಇದೀಗ  ಕೆಲವು ನಾಯಕರಲ್ಲಿ ಮತ್ತು  ಕಾರ್ಯಕರ್ತರಲ್ಲಿ ಉಂಟಾಗಿದೆ.

Advertisement

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಸುಳ್ಯದಲ್ಲಿ ಭಾರೀ ಆಕ್ರೋಶ ಅಸಮಾಧಾನ ಉಂಟಾಗಿತ್ತು. ಅದು ಸ್ವಲ್ಪ ತಣ್ಣಗಾಗಿರುವ ಸಂದರ್ಭದಲ್ಲಿ ಅರೆಭಾಷೆ ಅಕಾಡೆಮಿ ನೇಮಕ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕೆಲವು ಮಂದಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯತ್ವಕ್ಕೆ ತೆರೆಮರೆಯಲ್ಲಿ ಪ್ರಯತ್ನವೂ ನಡೆಸಿದ್ದರು. ಆದರೆ ಇದೀಗ ಹೊರ ಬಂದಿರುವ ಪಟ್ಟಿ ಸುಳ್ಯ ಬಿಜೆಪಿಗರಿಗೆ ಅಚ್ಚರಿ ಮೂಡಿಸಿದೆ.

ಈ ಹಿಂದೆ‌‌‌ ಡಿಸಿಸಿ ಬ್ಯಾಂಕ್ ಚುನಾವಣೆ, ಸುಳ್ಯ ಶಾಸಕ ಅಂಗಾರ ಅವರಿಗೆ‌ ಸಚಿವ ಸ್ಥಾನ ಸೇರಿದಂತೆ ಇದೀಗ ಅರೆಭಾಷೆ ಅಕಾಡೆಮಿ ಆಯ್ಕೆ ಕೂಡಾ ಅಸಮಾಧಾನಕ್ಕೆ ಕಾರಣವಾಗಿದೆ.

Advertisement

ಅರೆಭಾಷೆ ಅಕಾಡೆಮಿಯ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯ ಮೊದಲು ಮಂಡಲ ಸಮಿತಿಗೆ ತಿಳಿದಿರಲಿಲ್ಲ. ಇದೀಗ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಪಕ್ಷದ ಗಮನಕ್ಕೆ ಬಂದಿದೆ ಈ ಕುರಿತು ಪರಿಶೀಲಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

19 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

19 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

19 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

19 hours ago