Advertisement
ಸುದ್ದಿಗಳು

ಅರೆಭಾಷೆ ಅಕಾಡೆಮಿ ನೇಮಕಾತಿಗೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

Share

ಸುಳ್ಯ: ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯ ಪಟ್ಟಿ ಹೊರ ಬೀಳುತ್ತಿದ್ದಂತೆ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ.

ಪಕ್ಷದ ಗಮನಕ್ಕೆ ಬಾರದೇ ನೇಮಕಾತಿ ನಡೆದಿದೆ ಎಂಬುದು ಪಕ್ಷದ ಮುಖಂಡರ ಆಕ್ಷೇಪ. ಅರೆ ಭಾಷಿಕರಾದ ಗೌಡ ಸಮುದಾಯದ ಹಲವು ಮಂದಿ ನಾಯಕರು ಬಿಜೆಪಿಯಲ್ಲಿದ್ದಾರೆ‌. ಅವರಲ್ಲಿ ಕೆಲವರಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷತೆ, ಸದಸ್ಯತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷದ ಸಕ್ರೀಯ ನಾಯಕರನ್ನು, ಸದಸ್ಯರನ್ನು ನೇಮಕಾತಿ ಸಂದರ್ಭ ಕಡೆಗಣಿಸಲಾಗಿದೆ ಎಂಬ ಆರೋಪ, ಆಕ್ರೋಶ ಇದೀಗ  ಕೆಲವು ನಾಯಕರಲ್ಲಿ ಮತ್ತು  ಕಾರ್ಯಕರ್ತರಲ್ಲಿ ಉಂಟಾಗಿದೆ.

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಸುಳ್ಯದಲ್ಲಿ ಭಾರೀ ಆಕ್ರೋಶ ಅಸಮಾಧಾನ ಉಂಟಾಗಿತ್ತು. ಅದು ಸ್ವಲ್ಪ ತಣ್ಣಗಾಗಿರುವ ಸಂದರ್ಭದಲ್ಲಿ ಅರೆಭಾಷೆ ಅಕಾಡೆಮಿ ನೇಮಕ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕೆಲವು ಮಂದಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯತ್ವಕ್ಕೆ ತೆರೆಮರೆಯಲ್ಲಿ ಪ್ರಯತ್ನವೂ ನಡೆಸಿದ್ದರು. ಆದರೆ ಇದೀಗ ಹೊರ ಬಂದಿರುವ ಪಟ್ಟಿ ಸುಳ್ಯ ಬಿಜೆಪಿಗರಿಗೆ ಅಚ್ಚರಿ ಮೂಡಿಸಿದೆ.

ಈ ಹಿಂದೆ‌‌‌ ಡಿಸಿಸಿ ಬ್ಯಾಂಕ್ ಚುನಾವಣೆ, ಸುಳ್ಯ ಶಾಸಕ ಅಂಗಾರ ಅವರಿಗೆ‌ ಸಚಿವ ಸ್ಥಾನ ಸೇರಿದಂತೆ ಇದೀಗ ಅರೆಭಾಷೆ ಅಕಾಡೆಮಿ ಆಯ್ಕೆ ಕೂಡಾ ಅಸಮಾಧಾನಕ್ಕೆ ಕಾರಣವಾಗಿದೆ.

ಅರೆಭಾಷೆ ಅಕಾಡೆಮಿಯ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯ ಮೊದಲು ಮಂಡಲ ಸಮಿತಿಗೆ ತಿಳಿದಿರಲಿಲ್ಲ. ಇದೀಗ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಪಕ್ಷದ ಗಮನಕ್ಕೆ ಬಂದಿದೆ ಈ ಕುರಿತು ಪರಿಶೀಲಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

38 minutes ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

1 hour ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

15 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

23 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago