Advertisement
ಸುದ್ದಿಗಳು

ಅರೆಭಾಷೆ ಅಕಾಡೆಮಿ ನೇಮಕಾತಿಗೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

Share

ಸುಳ್ಯ: ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯ ಪಟ್ಟಿ ಹೊರ ಬೀಳುತ್ತಿದ್ದಂತೆ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ.

ಪಕ್ಷದ ಗಮನಕ್ಕೆ ಬಾರದೇ ನೇಮಕಾತಿ ನಡೆದಿದೆ ಎಂಬುದು ಪಕ್ಷದ ಮುಖಂಡರ ಆಕ್ಷೇಪ. ಅರೆ ಭಾಷಿಕರಾದ ಗೌಡ ಸಮುದಾಯದ ಹಲವು ಮಂದಿ ನಾಯಕರು ಬಿಜೆಪಿಯಲ್ಲಿದ್ದಾರೆ‌. ಅವರಲ್ಲಿ ಕೆಲವರಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷತೆ, ಸದಸ್ಯತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷದ ಸಕ್ರೀಯ ನಾಯಕರನ್ನು, ಸದಸ್ಯರನ್ನು ನೇಮಕಾತಿ ಸಂದರ್ಭ ಕಡೆಗಣಿಸಲಾಗಿದೆ ಎಂಬ ಆರೋಪ, ಆಕ್ರೋಶ ಇದೀಗ  ಕೆಲವು ನಾಯಕರಲ್ಲಿ ಮತ್ತು  ಕಾರ್ಯಕರ್ತರಲ್ಲಿ ಉಂಟಾಗಿದೆ.

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಸುಳ್ಯದಲ್ಲಿ ಭಾರೀ ಆಕ್ರೋಶ ಅಸಮಾಧಾನ ಉಂಟಾಗಿತ್ತು. ಅದು ಸ್ವಲ್ಪ ತಣ್ಣಗಾಗಿರುವ ಸಂದರ್ಭದಲ್ಲಿ ಅರೆಭಾಷೆ ಅಕಾಡೆಮಿ ನೇಮಕ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕೆಲವು ಮಂದಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯತ್ವಕ್ಕೆ ತೆರೆಮರೆಯಲ್ಲಿ ಪ್ರಯತ್ನವೂ ನಡೆಸಿದ್ದರು. ಆದರೆ ಇದೀಗ ಹೊರ ಬಂದಿರುವ ಪಟ್ಟಿ ಸುಳ್ಯ ಬಿಜೆಪಿಗರಿಗೆ ಅಚ್ಚರಿ ಮೂಡಿಸಿದೆ.

ಈ ಹಿಂದೆ‌‌‌ ಡಿಸಿಸಿ ಬ್ಯಾಂಕ್ ಚುನಾವಣೆ, ಸುಳ್ಯ ಶಾಸಕ ಅಂಗಾರ ಅವರಿಗೆ‌ ಸಚಿವ ಸ್ಥಾನ ಸೇರಿದಂತೆ ಇದೀಗ ಅರೆಭಾಷೆ ಅಕಾಡೆಮಿ ಆಯ್ಕೆ ಕೂಡಾ ಅಸಮಾಧಾನಕ್ಕೆ ಕಾರಣವಾಗಿದೆ.

ಅರೆಭಾಷೆ ಅಕಾಡೆಮಿಯ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯ ಮೊದಲು ಮಂಡಲ ಸಮಿತಿಗೆ ತಿಳಿದಿರಲಿಲ್ಲ. ಇದೀಗ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಪಕ್ಷದ ಗಮನಕ್ಕೆ ಬಂದಿದೆ ಈ ಕುರಿತು ಪರಿಶೀಲಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

4 minutes ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

13 minutes ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

1 hour ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

3 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

15 hours ago