Advertisement
ಸುದ್ದಿಗಳು

ಅರೆಭಾಷೆ ಅಕಾಡೆಮಿ ನೇಮಕಾತಿಗೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

Share

ಸುಳ್ಯ: ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯ ಪಟ್ಟಿ ಹೊರ ಬೀಳುತ್ತಿದ್ದಂತೆ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ.

ಪಕ್ಷದ ಗಮನಕ್ಕೆ ಬಾರದೇ ನೇಮಕಾತಿ ನಡೆದಿದೆ ಎಂಬುದು ಪಕ್ಷದ ಮುಖಂಡರ ಆಕ್ಷೇಪ. ಅರೆ ಭಾಷಿಕರಾದ ಗೌಡ ಸಮುದಾಯದ ಹಲವು ಮಂದಿ ನಾಯಕರು ಬಿಜೆಪಿಯಲ್ಲಿದ್ದಾರೆ‌. ಅವರಲ್ಲಿ ಕೆಲವರಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷತೆ, ಸದಸ್ಯತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷದ ಸಕ್ರೀಯ ನಾಯಕರನ್ನು, ಸದಸ್ಯರನ್ನು ನೇಮಕಾತಿ ಸಂದರ್ಭ ಕಡೆಗಣಿಸಲಾಗಿದೆ ಎಂಬ ಆರೋಪ, ಆಕ್ರೋಶ ಇದೀಗ  ಕೆಲವು ನಾಯಕರಲ್ಲಿ ಮತ್ತು  ಕಾರ್ಯಕರ್ತರಲ್ಲಿ ಉಂಟಾಗಿದೆ.

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಸುಳ್ಯದಲ್ಲಿ ಭಾರೀ ಆಕ್ರೋಶ ಅಸಮಾಧಾನ ಉಂಟಾಗಿತ್ತು. ಅದು ಸ್ವಲ್ಪ ತಣ್ಣಗಾಗಿರುವ ಸಂದರ್ಭದಲ್ಲಿ ಅರೆಭಾಷೆ ಅಕಾಡೆಮಿ ನೇಮಕ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕೆಲವು ಮಂದಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯತ್ವಕ್ಕೆ ತೆರೆಮರೆಯಲ್ಲಿ ಪ್ರಯತ್ನವೂ ನಡೆಸಿದ್ದರು. ಆದರೆ ಇದೀಗ ಹೊರ ಬಂದಿರುವ ಪಟ್ಟಿ ಸುಳ್ಯ ಬಿಜೆಪಿಗರಿಗೆ ಅಚ್ಚರಿ ಮೂಡಿಸಿದೆ.

ಈ ಹಿಂದೆ‌‌‌ ಡಿಸಿಸಿ ಬ್ಯಾಂಕ್ ಚುನಾವಣೆ, ಸುಳ್ಯ ಶಾಸಕ ಅಂಗಾರ ಅವರಿಗೆ‌ ಸಚಿವ ಸ್ಥಾನ ಸೇರಿದಂತೆ ಇದೀಗ ಅರೆಭಾಷೆ ಅಕಾಡೆಮಿ ಆಯ್ಕೆ ಕೂಡಾ ಅಸಮಾಧಾನಕ್ಕೆ ಕಾರಣವಾಗಿದೆ.

ಅರೆಭಾಷೆ ಅಕಾಡೆಮಿಯ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯ ಮೊದಲು ಮಂಡಲ ಸಮಿತಿಗೆ ತಿಳಿದಿರಲಿಲ್ಲ. ಇದೀಗ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಪಕ್ಷದ ಗಮನಕ್ಕೆ ಬಂದಿದೆ ಈ ಕುರಿತು ಪರಿಶೀಲಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago