ಸುಳ್ಯ: ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಒಂದು ತಿಂಗಳ ರಾಜ್ಯಮಟ್ಟದ ಅರೆಭಾಷೆ ರಂಗ ತರಬೇತಿ ಶಿಬಿರ ಹಳೆಗೇಟು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಫೆ.3 ರಂದು ಆರಂಭಗೊಂಡಿತ್ತು.
ಹಿರಿಯ ರಂಗಕರ್ಮಿ ತುಕಾರಾಂ ಏನೆಕಲ್ಲು ಉದ್ಘಾಟಿಸಿದರು. ರಂಗಭೂಮಿ ಒಂದು ಪ್ರಬಲ ಮಾಧ್ಯಮ, ಇದು ಬದುಕು ಕಟ್ಟುವುದನ್ನು ಕಲಿಸಿಕೊಡುತ್ತದೆ. ರಂಗ ತರಬೇತಿಯು ಭಾಷಾ ವಿಸ್ತಾರದ ಕೆಲಸ ಎಂದು ಅವರು ಹೇಳಿದರು.
ಮುಖ್ಯ ಅತಿಥಿ ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಮಾತನಾಡಿ, ನಾಟಕ ಕ್ಷೇತ್ರ ಮುಖವಾಡಗಳನ್ನು ಕಳಚಿ ನಮ್ಮನ್ನು ಶುದ್ಧ ಮನುಷ್ಯರನ್ನಾಗಿಸುತ್ತದೆ. ಅರೆಭಾಷೆ ಎಲ್ಲರ ಭಾಷೆಯಾಗಿ ಬೆಳೆಯುವಲ್ಲಿ ರಂಗ ತರಬೇತಿ ಒಂದು ಮಹತ್ವದ ವೇದಿಕೆ ಆಗಲಿ ಎಂದರು.
ಅರೆಭಾಷೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ರಾಂ ಸುಳ್ಳಿ, ರಂಗಕರ್ಮಿ ಎಂ.ಎಸ್. ಜಯಪ್ರಕಾಶ್, ಜೀವನ್ರಾಂ ಸುಳ್ಯ ಮಾತನಾಡಿದರು.
ಅರೆಭಾಷೆ ಅಕಾಡೆಮಿ ಸದಸ್ಯ ಧನಂಜಯ ಅಗೊಳಿಕಜೆ ಸ್ವಾಗತಿಸಿದರು. ವಿನೋದ್ ಮೂಡಗದ್ದೆ ವಂದಿಸಿದರು. ಎ.ಟಿ.ಕುಸುಮಾಧರ ಕಾರ್ಯಕ್ರಮ ನಿರೂಪಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…