ಸುಳ್ಯ: ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಒಂದು ತಿಂಗಳ ರಾಜ್ಯಮಟ್ಟದ ಅರೆಭಾಷೆ ರಂಗ ತರಬೇತಿ ಶಿಬಿರ ಹಳೆಗೇಟು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಫೆ.3 ರಂದು ಆರಂಭಗೊಂಡಿತ್ತು.
ಹಿರಿಯ ರಂಗಕರ್ಮಿ ತುಕಾರಾಂ ಏನೆಕಲ್ಲು ಉದ್ಘಾಟಿಸಿದರು. ರಂಗಭೂಮಿ ಒಂದು ಪ್ರಬಲ ಮಾಧ್ಯಮ, ಇದು ಬದುಕು ಕಟ್ಟುವುದನ್ನು ಕಲಿಸಿಕೊಡುತ್ತದೆ. ರಂಗ ತರಬೇತಿಯು ಭಾಷಾ ವಿಸ್ತಾರದ ಕೆಲಸ ಎಂದು ಅವರು ಹೇಳಿದರು.
ಮುಖ್ಯ ಅತಿಥಿ ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಮಾತನಾಡಿ, ನಾಟಕ ಕ್ಷೇತ್ರ ಮುಖವಾಡಗಳನ್ನು ಕಳಚಿ ನಮ್ಮನ್ನು ಶುದ್ಧ ಮನುಷ್ಯರನ್ನಾಗಿಸುತ್ತದೆ. ಅರೆಭಾಷೆ ಎಲ್ಲರ ಭಾಷೆಯಾಗಿ ಬೆಳೆಯುವಲ್ಲಿ ರಂಗ ತರಬೇತಿ ಒಂದು ಮಹತ್ವದ ವೇದಿಕೆ ಆಗಲಿ ಎಂದರು.
ಅರೆಭಾಷೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ರಾಂ ಸುಳ್ಳಿ, ರಂಗಕರ್ಮಿ ಎಂ.ಎಸ್. ಜಯಪ್ರಕಾಶ್, ಜೀವನ್ರಾಂ ಸುಳ್ಯ ಮಾತನಾಡಿದರು.
ಅರೆಭಾಷೆ ಅಕಾಡೆಮಿ ಸದಸ್ಯ ಧನಂಜಯ ಅಗೊಳಿಕಜೆ ಸ್ವಾಗತಿಸಿದರು. ವಿನೋದ್ ಮೂಡಗದ್ದೆ ವಂದಿಸಿದರು. ಎ.ಟಿ.ಕುಸುಮಾಧರ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…