ಸುಳ್ಯ: ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಒಂದು ತಿಂಗಳ ರಾಜ್ಯಮಟ್ಟದ ಅರೆಭಾಷೆ ರಂಗ ತರಬೇತಿ ಶಿಬಿರ ಹಳೆಗೇಟು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಫೆ.3 ರಂದು ಆರಂಭಗೊಂಡಿತ್ತು.
ಹಿರಿಯ ರಂಗಕರ್ಮಿ ತುಕಾರಾಂ ಏನೆಕಲ್ಲು ಉದ್ಘಾಟಿಸಿದರು. ರಂಗಭೂಮಿ ಒಂದು ಪ್ರಬಲ ಮಾಧ್ಯಮ, ಇದು ಬದುಕು ಕಟ್ಟುವುದನ್ನು ಕಲಿಸಿಕೊಡುತ್ತದೆ. ರಂಗ ತರಬೇತಿಯು ಭಾಷಾ ವಿಸ್ತಾರದ ಕೆಲಸ ಎಂದು ಅವರು ಹೇಳಿದರು.
ಮುಖ್ಯ ಅತಿಥಿ ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಮಾತನಾಡಿ, ನಾಟಕ ಕ್ಷೇತ್ರ ಮುಖವಾಡಗಳನ್ನು ಕಳಚಿ ನಮ್ಮನ್ನು ಶುದ್ಧ ಮನುಷ್ಯರನ್ನಾಗಿಸುತ್ತದೆ. ಅರೆಭಾಷೆ ಎಲ್ಲರ ಭಾಷೆಯಾಗಿ ಬೆಳೆಯುವಲ್ಲಿ ರಂಗ ತರಬೇತಿ ಒಂದು ಮಹತ್ವದ ವೇದಿಕೆ ಆಗಲಿ ಎಂದರು.
ಅರೆಭಾಷೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ರಾಂ ಸುಳ್ಳಿ, ರಂಗಕರ್ಮಿ ಎಂ.ಎಸ್. ಜಯಪ್ರಕಾಶ್, ಜೀವನ್ರಾಂ ಸುಳ್ಯ ಮಾತನಾಡಿದರು.
ಅರೆಭಾಷೆ ಅಕಾಡೆಮಿ ಸದಸ್ಯ ಧನಂಜಯ ಅಗೊಳಿಕಜೆ ಸ್ವಾಗತಿಸಿದರು. ವಿನೋದ್ ಮೂಡಗದ್ದೆ ವಂದಿಸಿದರು. ಎ.ಟಿ.ಕುಸುಮಾಧರ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…